Flash News

ಪುತ್ತೂರು | ಜಾನುವಾರು ಖರೀದಿಸಿದ ರಶೀದಿ ಎಂದು ಸುಳ್ಳು ದಾಖಲೆ ಪ್ರಸಾರ ಆರೋಪ: ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 115/2025. ಕಲಂ 132, 109, 303(2) r/w 3(5) ಭಾರತೀಯ ನ್ಯಾಯ ಸಂಹಿತೆ 2023. ಮತ್ತು ಕಲಂ 4, 5, 6, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿ ಬಂಧಕ ಕಾಯ್ದೆ & ಸಂರಕ್ಷಣಾ ಕಾಯ್ದೆ 2020 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಖರೀದಿ ಮಾಡಿರುವ ರಶೀದಿಗಳೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದ ದಾಖಲೆಗಳ ಬಗ್ಗೆ ವಿಚಾರಿಸಲಾಗಿ, ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿರವರು ದೃಢೀಕರಿಸಿದಂತೆ, ಶುಕ್ರವಾರದಂದು ಮಾತ್ರ ಜಾನುವಾರು ಸಂತೆ ನಡೆಯುವುದಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸದ್ರಿ ದಾಖಲೆಗಳು (ರಶೀದಿ ಕ್ರಮ ಸಂಖ್ಯೆ: 27653 ಹಾಗೂ 27654 ಗಳನ್ನು) ತಿದ್ದಿ ಸುಳ್ಳು ಸೃಷ್ಟನೆ ಮಾಡಿ ಪ್ರಸಾರ ಮಾಡಿರುವುದಾಗಿ ತಿಳಿದುಬಂದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದುವರಿದಂತೆ ಆರ್.ಟಿ.ಓ ಅಧಿಕಾರಿ ಮತ್ತು ಪಶು ವೈದ್ಯಾಧಿಕಾರಿಯವರಿಂದ ಮಾಹಿತಿ ಪಡೆಯಲಾಗಿ, ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲು ಅನುಮತಿ ನೀಡಿರುವುದಿಲ್ಲವೆಂದು ಮಾಹಿತಿಯನ್ನು ನೀಡಿರುತ್ತಾರೆ. ಈ ರೀತಿ ಸುಳ್ಳು ಸೃಷ್ಟನೆ ಮಾಡಿದ ಹಾಗೂ ನೈಜವಾಗಿರದ ದಾಖಲೆಗಳೆಂದು ತಿಳಿದಿದ್ದರು ಕೂಡಾ, ಆರೋಪಿಗಳನ್ನು ರಕ್ಷಿಸುವ ದುರುಧ್ಧೇಶದಿಂದ State office SDPI Karnataka ಎಂಬ ಹೆಸರಿನ“X”ಖಾತೆಯ ಖಾತೆದಾರರು, Thejasnews.com ನ ಮಾಲಕ/ಸಂಪಾದಕ ಮತ್ತು Sadath Bajathur ಎಂಬವರು ಹಾಗೂ ಇತರ ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುವ ಮೂಲಕ, ಸಾರ್ವಜನಿಕರು ಉದ್ವೇಗಗೊಂಡು ಜನರು ಗುಂಪು ಕೂಡಿ ದೊಂಬಿಯಂತಹ ಅಪರಾಧ ನಡೆಸಲು ಸನ್ನಿವೇಶ ಸೃಷ್ಟಿಸಿರುತ್ತಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ 05.11.2025 ರಂದು ಅ.ಕ್ರ: 123-2025, ಕಲಂ: 233,240,338,353(1)(b),192,61(2)(b),238(c),r/w3(5))ಭಾರತೀಯ ನ್ಯಾಯ ಸಂಹಿತೆ 2023,ರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.