Flash News

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ದುರ್ಮರಣ

ಪುಣೆ: ಬಾರಾಮತಿಯಲ್ಲಿ ಡಿಸಿಎಂ ಅಜಿತ್ ಪವಾರ್ ಅವರ ಚಾರ್ಟೆಡ್​ ವಿಮಾನ ಲ್ಯಾಂಡಿಂಗ್​ ವೇಳೆ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ. ಅಜಿತ್​ ಪವಾರ್ ಅವರೊಂದಿಗೆ​ ಅವರ ಭದ್ರತಾ ಸಿಬ್ಬಂದಿ ವಿಮಾನದಲ್ಲಿ ಇದ್ದರು ಎಂದು ಮೂಲಗಳು ದೃಢಪಡಿಸಿವೆ. ಬಾರಾಮತಿಯಲ್ಲಿ ಇಂದು ನಿಗದಿಯಾಗಿದ್ದ ರ್ಯಾಲಿಯಲ್ಲಿ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಪಾಲ್ಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಭೀಕರ ಅವಘಡ ಸಂಭವಿಸಿದೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ

ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದ ವಿಮಾನ ಪತನವಾಗಿದೆ. ಗಾಯಗಳು ಅಥವಾ ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರಭದಲ್ಲಿ ವಿಮಾನ ಪತನವಾಗಿದೆ.

RSS ಶೋಭಾಯಾತ್ರೆಯಲ್ಲಿ ಹೆಜ್ಜೆ ಹಾಕಿದ ಕಾಂಗ್ರೆಸ್ ಶಾಸಕ ಮಂತರ್ ಗೌಡ: ಚರ್ಚೆಗೆ ಗ್ರಾಸವಾಗಿರುವ ಕೇಸರಿ ನಡೆ

ಮಡಿಕೇರಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) 100 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಕುಶಾಲನಗರದಲ್ಲಿ ಜ.25 ರಂದು ನಡೆದ ‘ಹಿಂದೂ ಸಂಗಮ’ ಕಾರ್ಯಕ್ರಮದ ಶೋಭಾಯಾತ್ರೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡಿದ್ದು, ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದಾರೆ. ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ RSS ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಕುಶಾಲನಗರದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಇದರ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಶೋಭಾಯಾತ್ರೆ ತಾವರೆಕರೆ ಬಳಿಯಿಂದ ಆರಂಭಗೊಂಡು […]

ನಿಮ್ಮ ಆಟ ನಡೆಯಲ್ಲ: ಸುರ್ಜೇವಾಲ ಸಮ್ಮುಖದಲ್ಲೇ ಡಿಕೆ ಡಿಕೆ ಘೋಷಣೆ ಕೂಗಿದ ಅಭಿಮಾನಿಗಳು, ಸಿಟ್ಟಾದ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ (ಮನರೇಗಾ) ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದರು. ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು. ಮನರೇಗಾ […]

Mangaluru | ಧಮ್ಕಿ ಪುಡಾರಿ ರಾಜೀವ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಅರೆಸ್ಟ್..!

ಫಾರ್ಮ್ ಹೌಸ್ ನಲ್ಲಿ ಅಡಗಿಕೊಂಡಿದ್ದ ಕಾಂಗ್ರೆಸ್ ಮುಖಂಡನಿಗೆ ಡ್ರಿಲ್ ! ಮಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪೌರಾಯುಕ್ತೆಗೆ ಅವಾಚ್ಯ ನಿಂದಿಸಿ ಲಾಕ್ ಆಗಿರುವ ಕಾಂಗ್ರೆಸ್ ಮುಖಂಡ ರಾಜೀವ ಗೌಡನಿಗೆ ಮಂಗಳೂರಿನ ಫಾರ್ಮ್ ಹೌಸ್ ನಲ್ಲಿ ಆಶ್ರಯ ನೀಡಲಾಗಿತ್ತು ಎನ್ನುವ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ. ‌ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಪೊಲೀಸರು ಫಾರ್ಮ್ ಹೌಸ್ ಮಾಲೀಕ ಮೈಕಲ್ ಜೋಸೆಫ್ ರೇಗೊ ಅವರನ್ನು ಬಂಧಿಸಿದ್ದಾರೆ. ರಾಜೀವ ಗೌಡ ತನ್ನ ಸಂಬಂಧಿಕರ ಕಾರಿನಲ್ಲಿ ಮಂಗಳೂರು ರೈಲು ನಿಲ್ದಾಣಕ್ಕೆ ಬಂದಿದ್ದು ಅಲ್ಲಿ ಕಾರು ಬಿಟ್ಟು ಹೋಗಿದ್ದ […]

ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ: ಮಹಿಳೆ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಚಿಕ್ಕಬಳ್ಳಾಪುರ: ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಸಲ್ಮಾಳನ್ನು ಚಾಕುವಿನಿಂದ ಇರಿದು ಕೊಂದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬಾಜಾನ್ ಯಾಕಾಗಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲವಾದರೂ, ಇವರಿಬ್ಬರ ಅನೈತಿಕ ಸಂಬಂಧ ವಿಚಾರದಲ್ಲಿ ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆ ಆಗಿತ್ತು ಎನ್ನಲಾಗಿದೆ. ಸಲ್ಮಾ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಗರಿಗಿರೆಡ್ಡಿಪಾಳ್ಯಾ […]

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಅನುಮೋದನೆ ಅಗತ್ಯವಿಲ್ಲ: ಸಂಚಲನ ಸೃಷ್ಟಿಸಿದ ಮೋಹನ್ ಭಾಗವತ್ ಹೇಳಿಕೆ

ಪಾಟ್ನಾ: ಭಾರತವು ಹಿಂದೂ ರಾಷ್ಟ್ರ ಮತ್ತು ಅದು ವಾಸ್ತವ ಸತ್ಯ ಆಗಿರುವುದರಿಂದ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಬಿಹಾರದ ಮುಜಫರ್‌ಪುರದಲ್ಲಿ ಸಾಮಾಜಿಕ ಸಾಮರಸ್ಯ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶವು ಈಗಾಗಲೇ ಒಂದಾಗಿರುವುದರಿಂದ ಹಿಂದೂ ರಾಷ್ಟ್ರವೆಂದು ಘೋಷಿಸುವ ಅಗತ್ಯವಿಲ್ಲ ಎಂದು ಹೇಳಿದರು. ಸಮಾಜದಲ್ಲಿ ವೈವಿಧ್ಯತೆ ಇದೆ, ವಿಭಜನೆಯಲ್ಲ. ಬ್ರಿಟಿಷರು ವಿಭಜನೆಗಳನ್ನು ವಿಸ್ತರಿಸಿದರು. ನಾವು ಆ ವಿಭಜನೆಯನ್ನು ನಿವಾರಿಸಿ ಹಿಂದೂ […]

ಮಂಗಳೂರಿನ ಟೆಕ್ಕಿ ಶರ್ಮಿಳಾ ಹತ್ಯೆ ಕೇಸಲ್ಲಿ ಟ್ವಿಸ್ಟ್; ಕೊಲೆಗಾರನ ಉದ್ದೇಶವೇ ಬೇರೆಯಾಗಿತ್ತು!

ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದಲ್ಲಿ ನಡೆದಿದ್ದ ಮಂಗಳೂರಿನ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ (ಟೆಕ್ಕಿ) ಶರ್ಮಿಳಾ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಆಘಾತಕಾರಿ ತಿರುವು ಸಿಕ್ಕಿದೆ. ಆರಂಭದಲ್ಲಿ ಅಗ್ನಿ ಅವಘಡದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಲಾಗಿದ್ದ ಈ ಪ್ರಕರಣ, ಈಗ ಅತ್ಯಾ*ಚಾರ ಯತ್ನ ಮತ್ತು ಬರ್ಬರ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಸಾಬೀತಾಗಿದೆ. ಆರೋಪಿ 18 ವರ್ಷದ ವಿದ್ಯಾರ್ಥಿ ಕರ್ನಲ್ ಕುರೈ ತನ್ನ ವಿಕೃತಿಯನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿ ಕರ್ನಲ್ ಕುರೈ ಮೃತ ಶರ್ಮಿಳಾ […]

ಸ್ವಾತಂತ್ರ, ಸಮಾನತೆ ಮತ್ತು ಭಾತೃತ್ವದ ಮೇಲೆ ನಿಂತ ಸಂವಿಧಾನದ ನೆರಳಿನಲ್ಲಿ ಮುನ್ನಡೆಯೋಣ: ಫಾರೂಕ್ ಫರಂಗಿಪೇಟೆ ಕರೆ

ಮಂಗಳೂರು: ಸ್ವಾತಂತ್ರ, ಸಮಾನತೆ ಮತ್ತು ಭಾತೃತ್ವ ಈ ಮೂರು ಕಂಬಗಳ ಮೇಲೆ ನಿಂತ ನಮ್ಮ ಸಂವಿಧಾನದ ನೆರಳಿನಲ್ಲಿ ಮುನ್ನಡೆಯೋಣ ಎಂದು ಟುಡೇ ಫೌಂಡೇಶನ್ ನ ಅಧ್ಯಕ್ಷ, ಮಾಜಿ ಜಿಪಂ ಸದಸ್ಯ ಉಮರ್ ಫಾರೂಕ್ ಕರೆ ನೀಡಿದ್ದಾರೆ. ದ.ಕ ಜಿ.ಪಂ.ಮಾ.ಹಿ.ಪ್ರಾ. ಶಾಲೆ ಪುದು ಇಲ್ಲಿ 77ನೇ ಗಣರಾಜ್ಯೋತ್ಸವದ‌ಲ್ಲಿ ಸಂಭ್ರಮ ನಡೆಯಿತು. ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರಮ್ಲಾನ್ ಕುಂಪನಮಜಲು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಉಮರ್ ಫಾರೂಕ್, ಹಕ್ಕು ಕೇಳುವ ಧೈರ್ಯದ ಜೊತೆಗೆ ಕರ್ತವ್ಯ ನಿಭಾಯಿಸುವ ಶಿಸ್ತಿದ್ದಾಗ ಮಾತ್ರನಿಜಾರ್ಥದಲ್ಲಿ […]

DG-IGP ಸಲೀಂ ವಿರುದ್ಧ ಸುಳ್ಳು ಸುದ್ದಿ: ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ

ಬೆಂಗಳೂರು: ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) ಎಂ.ಎ. ಸಲೀಂ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರ ವಿರುದ್ಧ ಸೈಬರ್ ಅಪರಾಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿರುವ ಮೂರನೇ ಎಫ್‌ಐಆರ್ ಇದಾಗಿದೆ. ಜನವರಿ 23 ರಂದು ಎಫ್‌ಐಆರ್ ದಾಖಲಾಗಿದ್ದು, ಎಫ್ಐಆರ್ ನಲ್ಲಿ ಪುನೀತ್ ಕೆರೆಹಳ್ಳಿ ಅವರು ನಾಲ್ಕರಿಂದ ಐದು ಸಹಚರರೊಂದಿಗೆ ಜನವರಿ 22 […]