ವಿಟ್ಲ | ಐಟಿಐಯಲ್ಲಿ ಚೂರಿ ಇರಿತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದಲ್ಲಿ ಇಬ್ಬರು ಐಟಿಐ ವಿದ್ಯಾರ್ಥಿಗಳು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ಪಟ್ಟಣದ ಐಟಿಐಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ (18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಥಮ ವರ್ಷದ ಎಲೆಕ್ಟ್ರಿಷಿಯನ್ ಕೋರ್ಸ್ ಕಲಿಯುತ್ತಿರುವ ರಿಯಾನ್ ಹಾಗೂ ವಿಟ್ಲ ನಿವಾಸಿ ಹೇಮಂತ್ ನಡುವೆ ಮಾತಿನ ಚಕಮಕಿ ನಡೆದಿತ್ತು ಎಂದು ತಿಳಿದು ಬಂದಿದೆ. ಬಳಿಕ ಹೇಮಂತ್ ಚೂರಿ […]
ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ: ಭುಗಿಲೆದ್ದ ‘ಕೈ’ ಕಾರ್ಯಕರ್ತರ ಅಸಮಾಧಾನ

ಬೆಂಗಳೂರು: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯಸರ್ಕಾರ ಮೊನ್ನೆಯಷ್ಟೇ ಆದೇಶಿಸಿದ್ದು, ಶಿಕಾರಿಪುರದ ಬಿಜೆಪಿ ಮುಖಂಡನಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರೋದೀಗ ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದೆ. ಪಕ್ಷದ ನಾಯಕರ ನಿರ್ಧಾರದ ವಿರುದ್ಧ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರೀ ಅಸಮಾಧಾನ ಹೊರಹಾಕಿದ್ದಾರೆ. 54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ, ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ […]
ಲವ್ವರ್ಗೆ ತಾಯಿಯ ಖಾಸಗಿ ಫೋಟೋ ರವಾನೆ: ತನಿಖೆ ವೇಳೆ ಪ್ರಿಯಕರನ ಮಾಸ್ಟರ್ ಪ್ಲ್ಯಾನ್ ಬಯಲು

ಬೆಂಗಳೂರು: ಮಗಳೇ ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋ ತೆಗೆದು ಲವ್ವರ್ಗೆ ಕಳುಹಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಪ್ರಿಯಕರನ ಮಾಸ್ಟರ್ ಪ್ಲ್ಯಾನ್ ಬಯಲಾಗಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ತಾಯಿಯೇ ತನ್ನ ಮಗಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ದೂರು ನೀಡಿದ್ದರು. ತಮ್ಮ ಹಾಗೂ ತಮ್ಮ ಅಕ್ಕನ ಖಾಸಗಿ ಫೋಟೋಗಳನ್ನು ಮಗಳು ಆಕೆಯ ಪ್ರಿಯಕರನಿಗೆ ಕಳಿಸಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಿದ್ದರು. ದೂರು ನೀಡುತ್ತಿದ್ದಂತೆ ಪೊಲೀಸರು 23 ವರ್ಷದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಕರೆಸಿ ವಿಚಾರಣೆ […]
ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿಯನ್ನು ಜೈಲಿನಲ್ಲೇ ಹತ್ಯೆ ಮಾಡಿದ ಅರುಣ್ ಚೌಧರಿ

ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಗೊಂಡಿದ್ದ ಆರೋಪಿಯನ್ನು ಫರಿದಾಬಾದ್ ಜೈಲಿನಲ್ಲೇ (Jail) ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಎಸಗಿದ್ದಾನೆ. ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ತಲೆಗೆ […]
Belthangady | ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಸುಳ್ಳಿನ ಪ್ರಹಸನ!

ಮಂಗಳೂರು; ಬೆಳ್ತಂಗಡಿಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಲೇಜು ಓದುತ್ತಿದ್ದ ಅಪ್ರಾಪ್ತ ಯುವತಿಯ ಅಪಹರಣ ಯತ್ನ ಪ್ರಕರಣ ಪೊಲೀಸರ ತನಿಖೆಯಲ್ಲಿ ಠುಸ್ ಆಗಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ ನಲ್ಲಿ ಗೀಚಿಕೊಂಡು ಅಪಹರಣ ಪ್ರಹಸನದ ಕತೆ ಕಟ್ಟಿದ್ದಾಳೆಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾಶಿಬೆಟ್ಟು ಸರ್ಕಾರಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಸ್ಕೂಟರ್ ತಡೆದು ಕಾರಿನಲ್ಲಿ ಬಂದಿದ್ದ ಮುಸುಕುಧಾರಿಗಳು ಸುದೆಮುಗೇರು ಎಂಬಲ್ಲಿ ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ, ಈ ವೇಳೆ ತನ್ನ ಕೈಗೆ ಚೂರಿಯಿಂದ ಹಲ್ಲೆ ಮಾಡಿದ್ದಾರೆಂದು ಯುವತಿ ದೂರಿದ್ದು ಬೆಳ್ತಂಗಡಿ ಸರ್ಕಾರಿ […]
ಎಪ್ಸ್ಟೀನ್ ಬಳಿ ಪತ್ತೆಯಾದ ಕಾಬಾದ ಪವಿತ್ರ ಬಟ್ಟೆ ‘ಕಿಸ್ವಾ’: ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು

ವಾಷಿಂಗ್ಟನ್: ಲೈಂಗಿಕ ಅಪರಾಧಿ ಹಾಗೂ ಮಕ್ಕಳನ್ನು ಶೋಷಿಸಿದ ಜೆಫ್ರಿ ಎಪ್ಸ್ಟೀನ್ಗೆ ಸಂಬಂಧಿಸಿದ ಅಮೆರಿಕ ನ್ಯಾಯ ಇಲಾಖೆಯ ಇತ್ತೀಚಿನ ದಾಖಲೆಗಳ ಬಿಡುಗಡೆಯು ಜಾಗತಿಕ ಮುಸ್ಲಿಂ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಡುಗಡೆಯಾದ ಫೈಲ್ಗಳಲ್ಲಿ ಇರುವ ಚಿತ್ರವೊಂದರಲ್ಲಿ, ಎಪ್ಸ್ಟೀನ್ ಯುನೈಟೆಡ್ ಅರಬ್ ಎಮಿರೇಟ್ಸ್ನ ಬಿಲಿಯನೇರ್ ಸುಲ್ತಾನ್ ಅಹ್ಮದ್ ಬಿನ್ ಸುಲಾಯೆಮ್ ಅವರನ್ನು ಭೇಟಿಯಾಗುವ ವೇಳೆ ಕಿಸ್ವಾ ಎಂದು ಕರೆಯಲ್ಪಡುವ ಕಾಬಾದ ಮೇಲೆ ಹಾಕುವ ಪವಿತ್ರ ಬಟ್ಟೆಯ ತುಣುಕನ್ನು ನೆಲದ ಮೇಲೆ ಇಟ್ಟಿರುವುದು ಕಾಣಿಸುತ್ತದೆ. ಚಿತ್ರದಲ್ಲಿ ಇಬ್ಬರೂ ಆ ಬಟ್ಟೆಯ ಮೇಲೆ […]
ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೇಲೆ ಸುಖಾಸುಮ್ಮನೆ ಕೇಸ್ ಹಾಕುವಂತಿಲ್ಲ: ಡಿಜಿಪಿ ಎಂ.ಎ. ಸಲೀಮ್ ಹೊಸ ಮಾರ್ಗಸೂಚಿ

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಲ್ಲಿ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್ಐಆರ್ ದಾಖಲಿಸುವುದಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG & IGP) ಎಂ.ಎ. ಸಲೀಮ್ ಬ್ರೇಕ್ ಹಾಕಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸುವ ಉದ್ದೇಶದಿಂದ ಫೆಬ್ರವರಿ 7 ರಂದು ಹೊಸ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ಸಾಮಾಜಿಕ ಮಾಧ್ಯಮಗಳಲ್ಲಿನ ಆಕ್ಷೇಪಾರ್ಹ ಪೋಸ್ಟ್ಗಳ ಬಗ್ಗೆ […]
ತುಳು, ಮಲಯಾಳಂ ಮಾತನಾಡುತ್ತಿದ್ದ ಪ್ರಖ್ಯಾತ ಇನ್ಫ್ಲುಯೆನ್ಸರ್ ಚಿನ್ನು ಪಾಪು ಸಾವಿಗೆ ಶರಣು!

ಅಡೂರು: ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಆತ್ಮಹತ್ಯೆ ಮಾಡಿಕೊಡಿದ್ದಾರೆ. ಆಡೂರು ಮೂಲದ ಚಿನ್ನು ಪಾಪು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಗೆ 24 ವರ್ಷ ವಯಸ್ಸಾಗಿತ್ತು. ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಅವರನ್ನ ಆಸ್ಪತ್ರೆಗೆ ದಾಖಲು ಮಾಡುವ ವೇಳೆಗೆ ಅವರು ಸಾವು ಕಂಡಿರುವುದು ದೃಢವಾಗಿತ್ತು. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಮಹಿಳೆಯ ನಿಜವಾದ ಹೆಸರು […]
ಸಾವರ್ಕರ್ಗೆ ಭಾರತರತ್ನ ಕೊಟ್ರೆ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದವರಿಗೆ ಮಾಡೋ ಅಪಮಾನ: ರಿಜ್ವಾನ್ ಅರ್ಷದ್
ಬೆಂಗಳೂರು : ಸಂಪುಟ ವಿಸ್ತರಣೆ ಆಗಲೇಬೇಕು. ಹೊಸಬರಿಗೆ ಅವಕಾಶ ಸಿಗಬೇಕು ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಲ್ಲಿ ಮಾತನಾಡಿದ ಅವರು, ಸರ್ಕಾರ ಬಂದು ಮೂರು ವರ್ಷ ಆಗಿದೆ. ಬದಲಾವಣೆ ಒಳ್ಳೆಯದು ಎಂದಿದ್ದಾರೆ. ಸಿಎಂ ಬದಲಾವಣೆ, ಪವರ್ ಶೇರಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ವಿಚಾರವಾಗಿ ಸಾಕಷ್ಟು ಚರ್ಚೆಗಳಾಗಿವೆ. ನಾನು ಮಾತನಾಡಿ ವಿವಾದ ದೊಡ್ಡದಾಗಿಸಲ್ಲ. ಸಿದ್ದರಾಮಯ್ಯ ನಮ್ಮ ಲೀಡರ್, ಅವರ ಕೆಲಸಗಳು ಪಕ್ಷಕ್ಕೆ ಬಲ ತಂದಿವೆ. ಅವರಿಗೆ ನಾನೊಬ್ಬ ಸಪೋರ್ಟ್ ಮಾಡಿದರೆ ಏನೂ […]
ಸಾವರ್ಕರ್ಗೆ ಮಾತ್ರವಲ್ಲ, ಗಾಂಧಿಯನ್ನು ಹತ್ಯೆಗೈದ ಗೋಡ್ಸೆಗೂ ಒಂದು ದಿನ ಬಿಜೆಪಿ ಭಾರತ ರತ್ನ ಕೊಡಿಸುತ್ತದೆ: ಓವೈಸಿ ಕಿಡಿ

ಮೆಹಬೂಬನಗರ (ತೆಲಂಗಾಣ): ವಿ.ಡಿ. ಸಾವರ್ಕರ್ ಅವರಿಗೆ ಭಾರತ ರತ್ನ ನೀಡಬೇಕೆಂಬ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಬೇಡಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ‘ಗಾಂಧಿಯನ್ನು ಹತ್ಯೆಗೈದ ಗೋಡ್ಸೆಗೂ ಒಂದು ದಿನ ಬಿಜೆಪಿ ಭಾರತ ರತ್ನ ಕೊಡಿಸುತ್ತದೆ’ ಎಂದಿದ್ದಾರೆ. ‘1857ರಲ್ಲಿ ಬ್ರಿಟಿಷರ ವಿರುದ್ಧ ನಡೆದ ಹೋರಾಟದಲ್ಲಿ ಹೈದರಾಬಾದ್ನ ಮಕ್ಕಾ ಮಸೀದಿಯ ಮೌಲ್ವಿ ಅಲ್ಲಾವುದ್ದೀನ್ ಅವರು ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಅವರನ್ನು ಔರಂಗಾಬಾದ್ನಲ್ಲಿ ಸೆರೆ ಹಿಡಿಯಲಾಯಿತು. ನಿಜಾಮರಿಗೆ ಬ್ರಿಟಿಷರ ರಕ್ಷಣೆ ಇತ್ತು. ಆದರೆ ಮೌಲ್ವಿ ಅಲ್ಲಾವುದ್ದೀನ್ ಅವರನ್ನು […]