ಕೊಡಗಿನ ಯುವತಿಯರ ಜೊತೆ ಲವ್ವಿಡವ್ವಿ; ಖಾಸಗಿ ಕ್ಷಣ ಚಿತ್ರೀಕರಿಸಿ ವಿಕೃತಿ, BBA ವಿದ್ಯಾರ್ಥಿ ಸವದ್ ಅರೆಸ್ಟ್

ಮಡಿಕೇರಿ:ಕಳೆದ ಕೆಲವು ದಿನದಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಕಾಲೇಜು ವಿದ್ಯಾರ್ಥಿನಿಯರ ಜೊತೆಗಿದ್ದ ಖಾಸಗಿ ಕ್ಷಣಗಳ ದೃಶ್ಯ ಚಿತ್ರೀಕರಿಸಿದ್ದ ವಿಡಿಯೋ ವೈರಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮೊಹಮ್ಮದ್ ಸವದ್ನನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಸೋಶಿಯಲ್ ಮೀಡಿಯಾದಲ್ಲಿ ಅಸಭ್ಯ ವಿಡಿಯೋ ಹರಿದಾಡುತ್ತಿರುವ ಬಗ್ಗೆ ತನಿಖೆ ಶುರು ಮಾಡಿದ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿ, ಆರೋಪಿ ಮೊಹಮ್ಮದ್ ಸವದ್ನನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ಕಾಲೇಜಿನಲ್ಲಿ ಮೊಹಮ್ಮದ್ […]
ಇಂದು ಚುನಾವಣೆ ನಡೆದರೆ NDA 352, ಇಂಡಿಯಾ 182 ಸ್ಥಾನ ಗೆಲುವು: ಇಂಡಿಯಾ ಟುಡೇ ಸಮೀಕ್ಷೆ

ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯ ಪ್ರಕಾರ, ಇಂದು ಲೋಕಸಭಾ ಚುನಾವಣೆ ನಡೆದರೆ ಎನ್ಡಿಎ ಮೈತ್ರಿಕೂಟ 352 ಸ್ಥಾನಗಳನ್ನು ಗೆಲ್ಲಲಿದೆ. ಇದಕ್ಕೆ ಪ್ರತಿಯಾಗಿ, ಇಂಡಿಯಾ ಒಕ್ಕೂಟವು 182 ಸ್ಥಾನಗಳಿಗೆ ಕುಸಿಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಇಂದು ಲೋಕಸಭಾ ಚುನಾವಣೆಯೇನಾದರೂ ನಡೆದರೆ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟ ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ 352ರಲ್ಲಿ ಭರ್ಜರಿ ಗೆಲುವು ಸಾಧಿಸಲಿದೆ. ಇಂಡಿಯಾ ಒಕ್ಕೂಟ 182 ಸ್ಥಾನಗಳಿಗೆ ತೃಪ್ತಿಪಡಲಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್ […]
ಅಜಿತ್ ಪವಾರ್ ವಿಮಾನ ಪತನ ಕೇಸ್ನಲ್ಲಿ ಸ್ಫೋಟಕ ಟ್ವಿಸ್ಟ್: ಕೊನೇ ಕ್ಷಣದಲ್ಲಿ ಪೈಲಟ್ ಬದಲಾಗಿದ್ದೇಕೆ?

ಮುಂಬೈ: ಬಾರಾಮತಿಯಲ್ಲಿ ಅಜಿತ್ ಪವಾರ್ ಇದ್ದ ವಿಮಾನ ಪತನ ಪ್ರಕರಣದಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಆ ದಿನ ವಿಮಾನ ಹಾರಿಸಬೇಕಿದ್ದ ಪೈಲಟ್ ಬೇರೆ, ಆದ್ರೆ ಪವಾರ್ ಜೊತೆಗೆ ಹೋದ ಪೈಲಟ್ಗಳೇ ಬೇರೆ ಅನ್ನೋದು ವರದಿಗಳಿಂದ ತಿಳಿದುಬಂದಿದೆ. ಬುಧವಾರ (ಜ.28) ಅಜಿತ್ ಪವಾರ್ ಅವರು ಪ್ರಯಾಣಿಸಬೇಕಿದ್ದ ವಿಮಾನವನ್ನ ಕ್ಯಾಪ್ಟನ್ ಸುಮಿತ್ ಕಪೂರ್ ಅವರು ಹಾರಿಸಬೇಕಿತ್ತು ಎಂದು ಕಪೂರ್ ಅವರ ಸ್ನೇಹಿತರು ತಿಳಿಸಿರೋದಾಗಿ ವರದಿಯಾಗಿದೆ. ಕಪೂರ್ ಮೂಲತಃ ಗುರುಗ್ರಾಮ್ನ ನಿವಾಸಿ, ಅವರ ಸಹೋದರ ಉದ್ಯಮಿ ಆಗಿದ್ದಾರೆ. ಕಪೂರ್ ಅವರ ಮಗ […]
ಫೆ.1ರಂದು ಬೆಂಗಳೂರಿನಲ್ಲಿ ‘ಬ್ಯಾರಿ ಕೂಟ’: ವಿದ್ಯಾರ್ಥಿ ವೇತನ ವಿತರಣೆ; ಆ್ಯಂಬ್ಯುಲೆನ್ಸ್ ಲೋಕಾರ್ಪಣೆ

“ಕರಾವಳಿ ಭಾಗದ ಬ್ಯಾರಿ ಸಮುದಾಯವರು ಉದ್ಯೋಗ, ವ್ಯಾಪಾರ, ಶಿಕ್ಷಣ ಸೇರಿದಂತೆ ಹಲವು ಕಾರಣಕ್ಕಾಗಿ ಬೆಂಗಳೂರಿನಲ್ಲಿ ಬಂದು ನೆಲೆಸಿದ್ದಾರೆ. ಬ್ಯಾರಿ ಸಮುದಾಯದ ಎಲ್ಲರನ್ನೂ ಒಂದೇ ವೇದಿಕೆಯಡಿ ಒಟ್ಟುಗೂಡಿಸುವ ಉದ್ದೇಶದಿಂದ ಕಳೆದ ಹಲವು ವರ್ಷಗಳ ಪ್ರಯತ್ನದ ಭಾಗವಾಗಿ ‘ಬ್ಯಾರಿಸ್ ಸೆಂಟ್ರಲ್ ಕಮಿಟಿ’ ಎಂಬ ಸಂಸ್ಥೆಯನ್ನು ಯುವಕರೇ ಹುಟ್ಟು ಹಾಕಿದ್ದು, ಸಮುದಾಯದ ನೋವು-ನಲಿವುಗಳಿಗೆ ಸ್ಪಂದಿಸುತ್ತಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಎಲ್ಲ ಬ್ಯಾರಿ ಸಮುದಾಯದ ಜನರನ್ನು ಒಂದುಗೂಡಿಸಿ ಪ್ರತಿ ವರ್ಷ ‘ಬ್ಯಾರಿ ಕೂಟ’ವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. 2026ರ ಬ್ಯಾರಿ ಕೂಟವನ್ನು 2026ರ ಫೆಬ್ರವರಿ 1ರ […]
ಮಂಗಳೂರು | ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ನಿಂದ ‘ಕುರಾನ್ ಕಿರಾತ್’ ರಾಷ್ಟ್ರಮಟ್ಟದ ಸ್ಪರ್ಧೆ: 50 ದೇಶಗಳ ಸ್ಪರ್ಧಿಗಳು ಭಾಗಿ
ಮಂಗಳೂರು: ಪವಿತ್ರ ಕುರಾನ್ ಪಠಣದ ಮಹತ್ವವನ್ನು ಯುವಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕುರಾನ್ ಕಿರಾತ್ ರಾಷ್ಟ್ರಮಟ್ಟದ ಸ್ಪರ್ಧೆ ನಡೆಯಿತು. ರಾಷ್ಟ್ರಮಟ್ಟದ ಸ್ಪರ್ಧೆಗೆ ದೇಶಾದ್ಯಂತ ಭಾರಿ ಸ್ಪಂದನೆ ದೊರಕಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಟ್ಟು 2,252 ಮಂದಿ ಸ್ಪರ್ಧಿಗಳು ಆನ್ಲೈನ್ ಮೂಲಕ ತಮ್ಮ ಕಿರಾತ್ ವಿಡಿಯೋಗಳನ್ನು ಕಳುಹಿಸಿದ್ದರು. ಅವುಗಳಲ್ಲಿ ತಾಂತ್ರಿಕ ಪರಿಶೀಲನೆ ಮತ್ತು ತಜ್ಞ ನ್ಯಾಯಾಧೀಶರ ಮೌಲ್ಯಮಾಪನದ ಬಳಿಕ 50 ಸ್ಪರ್ಧಿಗಳನ್ನು ಅಂತಿಮ ಹಂತಕ್ಕೆ ಆಯ್ಕೆ ಮಾಡಲಾಗಿತ್ತು. ಈ ಆಯ್ಕೆಯಾದ ಸ್ಪರ್ಧಿಗಳು ಮಂಗಳೂರಿನ ಇಂಡಿಯನ್ ಕನ್ವೆನ್ಶನ್ […]
ವಿಮಾನ ದುರಂತಕ್ಕೂ ಮೊದಲೇ ಅಜಿತ್ ಪವಾರ್ ಸಾವಿನ ಅಪ್ಡೇಟ್? ಅಸಲಿ ವಿಷಯವೇ ಬೇರೆ!

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಬುಧವಾರ (ಜನವರಿ 28) ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅವರೊಂದಿಗೆ, ಪ್ರಯಾಣಿಸುತ್ತಿದ್ದ ಇನ್ನೂ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಆತಂಕಕಾರಿ ಸಂಗತಿಯೊಂದು ಹರಿದಾಡುತ್ತಿದೆ. ‘ದುರಂತ ಸಂಭವಿಸುವ ಮೊದಲೇ, ಆನ್ಲೈನ್ ಮಾಹಿತಿಕೋಶ ‘ವಿಕಿಪಿಡಿಯಾ’ದಲ್ಲಿ ಅಜಿತ್ ಅವರ ಸಾವಿನ ಮಾಹಿತಿ ಅಪ್ಡೇಟ್ ಆಗಿತ್ತು. ಹಾಗಾಗಿ, ಅಪಘಾತ ಸಂಭವಿಸಲಿದೆ ಎಂಬುದು ಗೊತ್ತಾಗಿತ್ತು ಅಥವಾ ಇದೊಂದು ಪಿತೂರಿ ಇದ್ದಿರಬಹುದು’ ಎಂದು ಆರೋಪಿಸಲಾಗುತ್ತಿದೆ. 2019ರ ವಿಧಾನಸಭೆ […]
ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ, ‘ಸುಪ್ರೀಂ’ ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ

ಕೋಲ್ಕತ್ತಾ: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿನ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಒತ್ತಾಯಿಸಿದ್ದಾರೆ. ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳ ಮೂಲಕ ಸತ್ಯ ಹೊರಬರುವುದಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುವ ತನಿಖೆ ಮಾತ್ರ ವಿಶ್ವಾಸಾರ್ಹವಾಗಿರುತ್ತದೆ ಎಂದು ಹೇಳಿದ್ದಾರೆ. ‘ನಾವು ಸುಪ್ರೀಂ ಕೋರ್ಟ್ ಅನ್ನು ಮಾತ್ರ ನಂಬುತ್ತೇವೆ. ಇತರ ಎಲ್ಲ ಸಂಸ್ಥೆಗಳು ಸಂಪೂರ್ಣವಾಗಿ ರಾಜಿ ಮಾಡಿಕೊಂಡಿವೆ’ ಎಂದು ಅವರು ಸಿಂಗೂರ್ಗೆ ತೆರಳುವ ಮೊದಲು ಇಲ್ಲಿ ಸುದ್ದಿಗಾರರಿಗೆ […]
4 ದಿನಗಳ ಹಿಂದೆಯಷ್ಟೇ ಅಜಿತ್ ಪವಾರ್ ಬಗ್ಗೆ ಸಂಜಯ್ ರಾವತ್ ಸ್ಫೋಟಕ ಹೇಳಿಕೆ ನೀಡಿದ್ದ ಬೆನ್ನಲ್ಲೇ ದುರಂತ!

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಎನ್ಸಿಪಿ (ಅಜಿತ್ ಪವಾರ್ ಬಣ) ಮುಖ್ಯಸ್ಥ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಬುಧವಾರ ಪತನಗೊಂಡಿದ್ದು, ಡಿಸಿಎಂ ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಮತ್ತೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟಕ್ಕೆ ಮರಳಲಿದ್ದಾರೆ ಮತ್ತು ಎನ್ಸಿಪಿಯ ಎರಡೂ ಬಣಗಳು ಒಂದಾಗಲಿವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಸ್ಫೋಟಕ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಈ ದರುಂತ ಸಂಭವಿಸಿದೆ. ಕಳೆದ ಶನಿವಾರ (ಜ. 24) ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾವತ್, ಅಜಿತ್ […]
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ದುರ್ಮರಣ

ಪುಣೆ: ಬಾರಾಮತಿಯಲ್ಲಿ ಡಿಸಿಎಂ ಅಜಿತ್ ಪವಾರ್ ಅವರ ಚಾರ್ಟೆಡ್ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ. ಅಜಿತ್ ಪವಾರ್ ಅವರೊಂದಿಗೆ ಅವರ ಭದ್ರತಾ ಸಿಬ್ಬಂದಿ ವಿಮಾನದಲ್ಲಿ ಇದ್ದರು ಎಂದು ಮೂಲಗಳು ದೃಢಪಡಿಸಿವೆ. ಬಾರಾಮತಿಯಲ್ಲಿ ಇಂದು ನಿಗದಿಯಾಗಿದ್ದ ರ್ಯಾಲಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪಾಲ್ಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಭೀಕರ ಅವಘಡ ಸಂಭವಿಸಿದೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ

ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದ ವಿಮಾನ ಪತನವಾಗಿದೆ. ಗಾಯಗಳು ಅಥವಾ ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರಭದಲ್ಲಿ ವಿಮಾನ ಪತನವಾಗಿದೆ.