Flash News

ಪುನೀತ್ ಕೆರೆಹಳ್ಳಿ ಜಾಮೀನು ಮಂಜೂರು

ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ ಬೆದರಿಕೆ ಆರೋಪದ ಮೇಲೆ ಕೊಲೆ‌ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಇಂದು ನ್ಯಾಯಾಲಯ‌ ಜಾಮೀನು ಮಂಜೂರಾಗಿದೆ.

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಯುಎಇ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ

ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (BCCI) ಇದರ ವಾರ್ಷಿಕ ಮಹಾಸಭೆಯು ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು. ಈ ವಾರ್ಷಿಕ ಮಹಾಸಭೆಯಲ್ಲಿ 2026–2028ರ ಅವಧಿಗೆ ಹಿದಾಯತ್‌ ಅಡ್ಡೂರು ಅವರನ್ನು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. ಅವರ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ದುಬೈಯಲ್ಲಿ ನಡೆದ ‘ಬ್ಯಾರಿ ಸಮ್ಮೇಳನ’ವು ಯಶಸ್ವಿಯಾಗಿ ನಡೆದು, ಹೊಸ ಇತಿಹಾಸ ಸೃಷ್ಟಿಸಿತ್ತು. ಬಿಸಿಸಿಐ ಇದರ ನೂತನ ಪ್ರಧಾನ ಕಾರ್ಯದರ್ಶಿಯಾಗಿ […]

ಭಾರತಕ್ಕೆ ಒಳ್ಳೆಯದು- ಕೆಟ್ಟದ್ದು ಸಂಭವಿಸಿದರೆ ಹಿಂದೂಗಳನ್ನು ಪ್ರಶ್ನಿಸಲಾಗುತ್ತದೆ: RSS ಮುಖ್ಯಸ್ಥ ಮೋಹನ್ ಭಾಗವತ್

ಸಂಭಾಜಿ ನಗರ: ಭಾರತಕ್ಕೆ ಏನಾದರೂ ಒಳ್ಳೆಯದು ಅಥವಾ ಕೆಟ್ಟದು ಸಂಭವಿಸಿದರೆ, ಅದಕ್ಕೆ ಹಿಂದೂಗಳನ್ನು ಪ್ರಶ್ನಿಸಲಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರು, ಏಕೆಂದರೆ ಭಾರತವು ಕೇವಲ ಭೌಗೋಳಿಕ ಪ್ರದೇಶದ ಹೆಸರಲ್ಲ, ಆದರೆ ದೇಶದ ಪಾತ್ರ ನಡವಳಿಕೆ ಎಂದಿದ್ದಾರೆ.. ಹಿಂದೂ ಸಮಾಜವು ಸಾಂಪ್ರದಾಯಿಕವಾಗಿ ಎಲ್ಲರನ್ನೂ ಒಳಗೊಳ್ಳುತ್ತದೆ. ಆಚರಣೆಗಳು, ಉಡುಗೆ ತೊಡುಗೆ, ಆಹಾರ ಪದ್ಧತಿ, ಭಾಷೆ, ಜಾತಿ ಮತ್ತು ಉಪ-ಜಾತಿಗಳಲ್ಲಿ ವೈವಿಧ್ಯತೆಯನ್ನು ಒಳಗೊಂಡಿದೆ, ಹೀಗಾಗಿ ಸಂಘರ್ಷಕ್ಕೆ ಕಾರಣವಾಗಲು ಅವಕಾಶ ನೀಡುವುದಿಲ್ಲ ಎಂದು […]

ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ: ಶೋಭಾ ಕರಂದ್ಲಾಜೆ

ನಂಜನಗೂಡು: ಆಧ್ಯಾತ್ಮಿಕತೆ ಭಾರತ ದೇಶದ ಆತ್ಮ, ನಮ್ಮ ದೇಶದ ಸಂಸ್ಕೃತಿ ಮತ್ತು ಧರ್ಮ ಆಚಾರ, ವಿಚಾರವನ್ನು ಸಂರಕ್ಷಿಸುತ್ತಿರುವ ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂದು ಕೇಂದ್ರ ಕಾರ್ಮಿಕ, ಉದ್ಯೋಗ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ರಾಜ್ಯಮಟ್ಟದ ಭಜನಾಮೇಳ ಮತ್ತು ದೇಶಿ ಆಟಗಳು ಸೋಬಾನೆ ಪದ ರಂಗೋಲಿ ಸ್ಪರ್ಧೆ ಉದ್ಘಾಟಿಸಿ ಅವರು […]

Mangalore | ಡ್ರಗ್ಸ್ ವಿರುದ್ಧ ಕಮಿಷನರ್ ಸಮರ: ಇಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳ ದಿಢೀರ್ ತಪಾಸಣೆ

ಸುಹೈಲ್ ಕಂದಕ್ ಪೊಲೀಸರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ನಶೆ ಮುಕ್ತ ಮಂಗಳೂರು’ ಅಭಿಯಾನಕ್ಕೆ ದೊಡ್ಡ ಯಶಸ್ಸು ಮಂಗಳೂರು: ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಇದೇ ಮೊದಲ ಬಾರಿಗೆ ಮೆಡಿಕಲ್, ಇಂಜಿನಿಯರಿಂಗ್ ಓದುತ್ತಿರುವ ಕೇರಳದ ವಿದ್ಯಾರ್ಥಿಗಳನ್ನು ದಿಢೀರ್ ಆಗಿ ಡ್ರಗ್ಸ್ ತಪಾಸಣೆಗೆ ಒಳಪಡಿಸಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ ಒಂದೇ ದಿನ 200 ಮಂದಿಯನ್ನು ತಪಾಸಣೆ ನಡೆಸಿದ್ದು ಎಲ್ಲರೂ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಇತ್ತೀಚೆಗೆ ಡ್ರಗ್ಸ್ ವಿರುದ್ಧ ಕಠಿಣ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ […]

ಪೌರಾಯುಕ್ತೆಗೆ ಧಮ್ಕಿ ಕೇಸ್‌: ಖಾಕಿ ಕೈಗೆ ಸಿಗದ ಕಾಂಗ್ರೆಸ್ಸಿಗ!

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಧಮ್ಕಿ ಪ್ರಕರಣ ಸಂಬಂಧ ಪ್ರತ್ಯೇಕವಾಗಿ 2 ದೂರುಗಳು ದಾಖಲಾಗಿ 3 ದಿನ ಕಳೆದರೂ ಇನ್ನೂ ಆತನ ಬಂಧನ ಸಾಧ್ಯವಾಗಿಲ್ಲ. ರಾಜೀವ್‌ಗೌಡ ಬಂಧನಕ್ಕಾಗಿ ಎಸ್ಪಿ ಕುಶಲ್ ಚೌಕ್ಸೆ, ಚಿಂತಾಮಣಿ ಉಪ ವಿಭಾಗದ ಆರಕ್ಷಕ ಉಪಾಧೀಕ್ಷಕ ಪಿ.ಮುರಳೀಧರ್ ಮಾರ್ಗದರ್ಶನದಲ್ಲಿ ಶಿಡ್ಲಘಟ್ಟ ಠಾಣೆ ಸಿಪಿಐ ಆನಂದ್ ಕುಮಾರ್ ನೇತೃತ್ವದಲ್ಲಿ 2 ಪ್ರತ್ಯೇಕ ತಂಡಗಳನ್ನು ರಚಿಸಿ ವಿವಿಧೆಡೆ ಬುಧವಾರದಿಂದಲೇ ಕಾರ್ಯಾಚರಣೆಗೆ ಇಳಿದರೂ ರಾಜೀವ್‌ಗೌಡ ಬಂಧನ ಪೊಲೀಸರಿಗೆ ಸವಾಲಾಗಿದೆ. ಶಿಡ್ಲಘಟ್ಟ ಠಾಣೆಯಲ್ಲಿ ನಗರಸಭೆ […]

ವಲಸೆ ಕಾರ್ಮಿಕರ ಮನೆಗಳಿಗೆ ಅಕ್ರಮ ಪ್ರವೇಶ: ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳಿಗೆ ಬೇಡಿಕೆ ಇಟ್ಟು, ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿರುವʼ ಗಂಭೀರ ಆರೋಪದ ಮೇಲೆ ಕೊಲೆ‌ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ‘ದ್ವೇಷದ ಮಾತಿನ ವಿರುದ್ದ ಜನಾಂದೋಲನ/ Campaign Against Hate Speech’ ವತಿಯಿಂದ email ಮೂಲಕ ಮನವಿ ಸಲ್ಲಿಸಲಾಗಿತ್ತು. ʼಸ್ವತಃ ಆತನೇ ಸಾಮಾಜಿಕ […]

ಅಮೆಜಾನ್ ಮಳೆಕಾಡಿನ ಅನ್-ಕಾಂಟ್ಯಾಕ್ಟೆಡ್ ಬುಡಕಟ್ಟು ಜನರ ವಿಡಿಯೋ ವೈರಲ್‌

ಬ್ರೆಜಿಲ್: ಆಧುನಿಕ ನಾಗರಿಕತೆಯ ಯಾವುದೇ ಪರಿಚಯವಿಲ್ಲದೆ, ದಟ್ಟ ಅಮೆಜಾನ್ ಮಳೆಕಾಡಿನ ಮಧ್ಯೆ ಬದುಕುತ್ತಿರುವ ರಹಸ್ಯ ಬುಡಕಟ್ಟು ಜನಾಂಗವೊಂದರ ಇಲ್ಲಿಯವರೆಗೆ ಯಾರೂ ಕಾಣದ ಅತ್ಯಂತ ಸ್ಪಷ್ಟವಾದ ವಿಡಿಯೋ ಈಗ ಬಿಡುಗಡೆಯಾಗಿವೆ. ಖ್ಯಾತ ಪರಿಸರ ಸಂರಕ್ಷಣಾವಾದಿ ಮತ್ತು ಲೇಖಕ ಪಾಲ್ ರೊಸೋಲಿ ಅವರು ಈ ದೃಶ್ಯಗಳನ್ನು ಸಂಶೋಧಕ ಲೆಕ್ಸ್ ಫ್ರಿಡ್‌ಮನ್ ಅವರ ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದು, ಇದು ಜಗತ್ತಿನಲ್ಲೇ ಮೊದಲ ಬಾರಿಗೆ ಸೆರೆಯಾದ ಅತ್ಯಂತ ವಿಶಿಷ್ಟ ದೃಶ್ಯ ಎಂದು ಬಣ್ಣಿಸಿದ್ದಾರೆ. ಸುಮಾರು ಎರಡು ದಶಕಗಳಿಂದ ಅಮೆಜಾನ್ ಕಾಡುಗಳಲ್ಲಿ ಕೆಲಸ ಮಾಡುತ್ತಿರುವ ರೊಸೋಲಿ, […]

₹ 1 ಕೋಟಿ ಲಾಟರಿ ಬಹುಮಾನ ಗೆದ್ದ ಸಾದಿಕ್‌ ಅಪಹರಣ

ಕಣ್ಣೂರು: ಪೆರವೂರ್‌ನಲ್ಲಿ ₹ 1 ಕೋಟಿ ಲಾಟರಿ ಬಹುಮಾನ ಗೆದ್ದ ವ್ಯಕ್ತಿಯನ್ನು ಗುಂಪೊಂದು ಅಪಹರಿಸಿ, ಟಿಕೆಟ್‌ ಕಸಿದುಕೊಂಡಿರುವ ಪ್ರಕರಣ ವರದಿಯಾಗಿದೆ. ಪೆರವೂರ್‌ನ ಸಾದಿಕ್‌ ಎ.ಕೆ. (46) ಎಂಬವರು ಡಿಸೆಂಬರ್‌ 30ರಂದು ನಡೆದ ‘ಲಕ್ಕಿ ಡ್ರಾ’ ವೇಳೆ ಬಹುಮಾನ ಗೆದ್ದಿದ್ದರು. ಅವರನ್ನು ಅಪಹರಿಸಿರುವ ಐವರು ಆರೋಪಿಗಳ ಗುಂಪು ‘ಸ್ತ್ರೀ ಶಕ್ತಿ ಲಾಟರಿ’ ಟಿಕೆಟ್‌ ಅನ್ನು ಕಸಿದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಳ ಗುಂಪಿನ ಒಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು, ಉಳಿದವರಿಗಾಗಿ ಬಲೆ ಬೀಸಿದ್ದಾರೆ. ‘ಬಹುಮಾನದ ಮೊತ್ತದಲ್ಲಿ ಒಂದಿಷ್ಟು ಹಣ ತೆರಿಗೆ ರೂಪದಲ್ಲಿ ತಕ್ಷಣವೇ […]

ಪುನೀತ್ ಕೆರೆಹಳ್ಳಿ, ಸಹಚರರ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

ಬೆಂಗಳೂರು : ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ‘ದ್ವೇಷದ ಮಾತಿನ ವಿರುದ್ದ ಜನಾಂದೋಲನ/ Campaign Against Hate Speech’ ವತಿಯಿಂದ email ಮೂಲಕ ಮನವಿ ಸಲ್ಲಿಸಲಾಗಿದೆ. ʼಪುನೀತ್ ಕೆರೆಹಳ್ಳಿ ಎಂಬ ಕೊಲೆ‌ ಆರೋಪಿ ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳಿಗೆ ಬೇಡಿಕೆ ಇಟ್ಟು, ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿರುವʼ ಗಂಭೀರ ಆರೋಪಗಳನ್ನು ಮನವಿಯಲ್ಲಿ ವಿವರಿಸಲಾಗಿದೆ. ʼಸ್ವತಃ ಆತನೇ ಸಾಮಾಜಿಕ […]