Flash News

UAEಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆಯೇ ಅವಘಡವೊಂದು ಸಂಭವಿಸಿದ ಪರಿಣಾಮ ಭಾರತೀಯ ಯುವಕನೋರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಭಾರೀ ಗುಡುಗು ಸಹಿತ ಮಳೆ ಮುಂದುವರಿದಿದ್ದು, ಹವಾಮಾನ ವೈಪರೀತ್ಯದಿಂದಾಗಿ ನಿವಾಸಿಗಳು ಮನೆಯೊಳಗೆ ಇರಲು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯವಿದ್ದರೆ ಮಾತ್ರ ಸಂಚರಿಸುವಂತೆ ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಹವಾಮಾನದಿಂದಾಗಿ ಎಮಿರೇಟ್ಸ್ ಮತ್ತು ಫ್ಲೈದುಬೈ ಸೇರಿ ಹಲವಾರು ವಿಮಾನಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 19 […]

ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ HIV ಸೋಂಕು

ಭೋಪಾಲ್: ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ ಎಚ್​ಐವಿ ಸೋಂಕು ತಗುಲಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಿಂದ ರಕ್ತ ವರ್ಗಾವಣೆ ಬಳಿಕ ಮಕ್ಕಳಲ್ಲಿ ಸೋಂಕು ದೃಢ ಪಟ್ಟಿದ್ದು, ರಕ್ತ ನಿಧಿಯ ಉಸ್ತುವಾರಿ ವೈದ್ಯರು ಹಾಗೂ ಪ್ರಯೋಗಾಲಯದ ಇಬ್ಬರು ಸಿಬ್ಬಂದಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಡಿ.16ರಂದು ಮಕ್ಕಳಲ್ಲಿ ಹೆಚ್​ಐವಿ ಸೋಂಕು ಇರೋದು ಬೆಳಕಿಗೆ ಬಂದಿತ್ತು. ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಸೋಂಕು ದೃಢಪಟ್ಟಿತ್ತು.ಮಕ್ಕಳು ಥಲಸ್ಸೇಮಿಯಾ ಎಂಬ ಅನುವಂಶಿಕ […]

ಭಾರತದ ಪ್ರಗತಿಗೆ ಅಲ್ಪಸಂಖ್ಯಾತರು ಒಗ್ಗೂಡಿ: ಶಾಸಕ ರಿಜ್ವಾನ್ ಅರ್ಷದ್ ಕರೆ

ಬೆಂಗಳೂರು: ಆಹಾರ, ಉಡುಪು, ಭಾಷೆ ಮತ್ತು ಸಂಸ್ಕೃತಿಯ ಆಯ್ಕೆಯ ವಿಚಾರದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ. ಈ ಸತ್ಯವನ್ನು ಒಪ್ಪಿಕೊಂಡು ಮುಂದುವರೆಯದಿದ್ದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರು ಗುರುವಾರ ಹೇಳಿದ್ದಾರೆ. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಗುರುವಾರ ನಗರದಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ರಿಜ್ವಾನ್ ಅರ್ಷದ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಂತಹ ಸೂಕ್ಷ್ಮ ಸಮಯದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಡಿತಗೊಳಿಸದೆ ಸಂವಿಧಾನವನ್ನು ಸರಿಯಾಗಿ ಜಾರಿಗೆ ತರುತ್ತಿದ್ದಾರೆಯೇ […]

Mangalore | 22 ದೇಶಗಳನ್ನು ಮಣಿಸಿ ಗೆದ್ದ ಕುಡ್ಲದ ಚೆಲುವೆ, ಮಗನ ʼಮಮ್ಮಿʼ ಈಗ ‌ʼಮಿಸೆಸ್‌ ಅರ್ಥ್‌ ಇಂಟರ್‌ ನ್ಯಾಷನಲ್!

ಮಂಗಳೂರು: ಮನೆ, ಸಂಸಾರ, ಮಗ, ಉದ್ಯಮವನ್ನೂ ನಿಭಾಯಿಸುತ್ತಾ, ಮಾಡೆಲಿಂಗ್ ಜಗತ್ತಿನಲ್ಲಿ ಛಾಪು ಮೂಡಿಸಿದ ಮಂಗಳೂರಿನ ಬೆಡಗಿಯೋರ್ವರು ಫಿಲಿಫೈನ್ಸ್​​ನಲ್ಲಿ ನಡೆದ ಮಿಸೆಸ್ ಅರ್ಥ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಕ್ರೌನ್ ಮುಡಿಗೇರಿಸಿದ್ದಾರೆ. ಮಂಗಳೂರಿನ ಚಿತ್ರಾಪುರದಲ್ಲಿ ಸೂಪರ್ ಮಾರ್ಕೆಟ್ ಉದ್ಯಮಿಯಾಗಿರುವ ವಿದ್ಯಾ ಸಂಪತ್ ಈ‌ ಸಾಧನೆ ಮಾಡಿದವರು. ಬೆಂಗಳೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು ವಿವಿಧ ರೌಂಡ್‌ಗಳ ಮೂಲಕ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಡಿ. 2 ರಿಂದ ಡಿ.10ರವರೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಭಾರತದಿಂದ ಆಯ್ಕೆಯಾದ ಏಕೈಕ ಸ್ಪರ್ಧಿ. […]

‘ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಕ್ರಮ ಸರಿ ಇದೆ’: ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂನ್ನು ಸಮರ್ಥಿಸಿಕೊಂಡ BJP ಸಚಿವ

ನವದೆಹಲಿ: ನೇಮಕಾತಿ ಪತ್ರ ಪಡೆಯಲು ಬಂದ ಮುಸ್ಲಿಂ ವೈದ್ಯೆಯ ಹಿಜಾಬ್ ಹಿಡಿದೆಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ಪರ ಕೇಂದ್ರ ಸಚಿವ ಗಿರಿರಾದ್ ಸಿಂಗ್ ಮಾತನಾಡಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಮೊನ್ನೆ ಸೋಮವಾರ ಪಾಟ್ನಾದಲ್ಲಿ ನಡೆದ ಘಟನೆಗೆ ಪ್ರತಿಕ್ರಿಯಿಸಿದ ಸಚಿವ ಗಿರಿರಾಜ್ ಸಿಂಗ್, ಘಟನೆಯಿಂದ ಉಂಟಾದ ಆಘಾತದಿಂದಾಗಿ ಮಹಿಳೆ ಕೆಲಸ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಹೇಳಿದಾಗ ಪರವಾಗಿಲ್ಲ, ಅವರು ನರಕಕ್ಕೆ ಹೋಗಬಹುದು […]

Mangaluru: ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಕೋಮು ಪ್ರಚೋದನಕಾರಿ ಸಂದೇಶ: ಕುಖ್ಯಾತ ಕ್ರಿಮಿನಲ್ ಪೊಲೀಸ್ ಬಲೆಗೆ

ಮಂಗಳೂರು: ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಕಾಟಿಪಾಳ್ಳ ನಿವಾಸಿ ಅಭಿಷೇಕ್ ಎಮ್(23) ಬಂಧಿತ ಆರೋಪಿ. ಆರೋಪಿಯ ವಿರುದ್ಧ ಬಜಪೆ ಪೊಲೀಸ್ ಠಾಣಾ ಅ.ಕ್ರ. 84/2025 ಕಲಂ. 353(1) (ಸಿ), 353(2) 56,57 ಜೊತೆಗೆ 189 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ, mr_a_titude ಎಂಬ ಇನ್ಸ್ಟಾಗ್ರಾಮ್ ಪೇಜ್ ಮುಖಾಂತರ ಹೋಟೆಲ್ ನಿಸರ್ಗ ಎಂಬ ಫೋಟೋವನ್ನು ಹಾಕಿ ಅದರ ಮೇಲೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ […]

ಶಿವಮೊಗ್ಗ | ಕಾಂಗ್ರೆಸ್ ಪ್ರತಿಭಟನೆಯಲ್ಲಿ ಎಎಸ್ಐ ಮಾಂಗಲ್ಯ ಸರ ಕಳುವು: ಕಣ್ಣೀರಿಟ್ಟ ಅಧಿಕಾರಿ, ಕದ್ದವರು ಯಾರು?

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಪ್ರತಿಭಟನೆ ವೇಳೆ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧದ ಪಿತೂರಿ ಕಾನೂನುಬಾಹಿರ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದರು. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎಎಸ್‌ಐ ಅಮೃತಾ ಅವರು ಪ್ರತಿಭಟನಾಕಾರರನ್ನು […]

‘ನೀವು ಕರಾವಳಿಯವರು ಬೆಂಕಿ ಹಚ್ಚೋರು’ ಎಂದ ಸಚಿವ ಬೈರತಿ ಸುರೇಶ್; ಕೆರಳಿ ಕೆಂಡವಾದ ಸುನೀಲ್ ಕುಮಾರ್, ಕಾಮತ್

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ‘ನೀವು ಕರಾವಳಿಯವರು ಬೆಂಕಿ ಹಚ್ಚುವವರು’ ಎಂಬ ಹೇಳಿಕೆ ನೀಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದ್ದು, ಇದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಯಿತು. ಕರಾವಳಿ ಭಾಗದ ಬಿಜೆಪಿ ಶಾಸಕರು ಸಚಿವರ ವಿರುದ್ಧ ತಿರುಗಿಬಿದ್ದು, ಕ್ಷಮೆಯಾಚನೆಗೆ ಪಟ್ಟು ಹಿಡಿದ ಘಟನೆ ಕಲಾಪದ ದಿಕ್ಕನ್ನೇ ಬದಲಿಸಿತು. ಸದನದಲ್ಲಿ ಚರ್ಚೆಯ ವೇಳೆ ಸಚಿವ ಭೈರತಿ ಸುರೇಶ್ ಅವರು ಬಿಜೆಪಿ ಶಾಸಕರನ್ನು ಉದ್ದೇಶಿಸಿ, ‘ನೀವು ಕರಾವಳಿಯವರು […]

ಸಿಕ್ಕಿದ್ದೇ ಚಾನ್ಸ್ ಅಂತ ಕಂಡ ಕಂಡಲ್ಲಿ ಮುಟ್ಟಿದ್ರು; ಮಾಲ್​​ನಲ್ಲಿ ನಟಿಗೆ ಕಿರುಕುಳ

ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಎಲ್ಲರೂ ಸೆಲ್ಫಿಗೆ ಮುಗಿ ಬೀಳುತ್ತಾರೆ. ಆದರೆ, ಕೆಲವೊಮ್ಮೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾಗ ಅಲ್ಲಿ ಬೇರೆಯದೇ ರೀತಿಯ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಸಿಕ್ಕಿದ್ದೇ ಚಾನ್ಸ್ ಎಂದು ಕಂಡ ಕಂಡಲ್ಲಿ ಮುಟ್ಟುವ ಕಿಡಿಗೇಡಿಗಳೂ ಇದ್ದಾರೆ. ಈಗ ತೆಲುಗು ನಟಿ ನಿಧಿ ಅಗರ್​ವಾಲ್ ಅವರಿಗೂ ಇದೇ ರೀತಿಯ ಅನುಭವ ಆಗಿದೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆ ಹುಟ್ಟುಹಾಕಿದೆ. ನಿಧಿ ಅವರು ಹುಟ್ಟಿದ್ದು ಆಂಧ್ರದಲ್ಲಿ. ಅವರು ತಮ್ಮ ಶಿಕ್ಷಣವನ್ನು ಬೆಂಗಳೂರಿನಲ್ಲಿ ಮಾಡಿದ್ದಾರೆ. ಹೀಗಾಗಿ, […]

ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಿ, ನದಿಗಳನ್ನು ಪೂಜಿಸಿದರೆ ಅವರಿಗೆ ಭಾರತದಲ್ಲಿ ಏನೂ ತೊಂದರೆ ಇಲ್ಲ: RSS ನಾಯಕ ಹೊಸಬಾಳೆ

ಲಕ್ನೋ: ಹಿಂದೂ ಧರ್ಮ ಶ್ರೇಷ್ಠವಾದದ್ದು. ಭಾರತ ನೆಲದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು ಎಂದು ಹಿರಿಯ ಆರ್‌ಎಸ್‌ಎಸ್‌ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಏನೂ ತೊಂದರೆಯಾಗುವುದಿಲ್ಲ. ನಮ್ಮ ಮುಸ್ಲಿಂ ಸಹೋದರರು ಸಹ ಸೂರ್ಯ ನಮಸ್ಕಾರ ಮಾಡಿದರೆ, ಅವರಿಗೆ ಏನೂ ಆಗಲ್ಲ. ಹಾಗಂತ ಅವರು ಮಸೀದಿಗೆ ಹೋಗುವುದನ್ನು ಯಾರೂ ತಡೆಯುವುದಿಲ್ಲ. ನಮ್ಮ ಹಿಂದೂ ಧರ್ಮ ಸರ್ವೋಚ್ಛ. ಅದು ಎಲ್ಲರ ಪರವಾಗಿದೆ ಎಂದು ಹೊಸಬಾಳೆ ಪ್ರತಿಪಾದಿಸಿದ್ದಾರೆ. ಯೋಗಾಸನಗಳ ಅನುಕ್ರಮವಾದ ಸೂರ್ಯ ನಮಸ್ಕಾರವು ವೈಜ್ಞಾನಿಕ ಮತ್ತು […]