ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಬೇಲ್ ಸಿಗುವ ನಿರೀಕ್ಷೆಯಿದೆ: ಜಮೀರ್ ಪುತ್ರ ಝೈದ್ ಖಾನ್

ಹಾವೇರಿ: ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್ ಪುತ್ರ ಝೈದ್ ಖಾನ್ ಹೇಳಿದ್ದಾರೆ. ಹಾವೇರಿಯಲ್ಲಿ ಕಲ್ಟ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೋವಿನಲ್ಲೂ ದರ್ಶನ್ ಅಭಿಮಾನಿಗಳಿಗೆ ಸಕ್ಸಸ್ ಸಿನಿಮಾ ಕೊಟ್ಟಿದ್ದಾರೆ. ʻದರ್ಶನʼ ಎಂಬ ಹೆಸರಿನಿಂದ ಸಿನಿಮಾ ಸಕ್ಸಸ್ ಆಗೇ ಆಗುತ್ತದೆ. ಇವೆರಡನ್ನ ನಾನು ಡೆವಿಲ್ ನೋಡಿ ಕಲಿತುಕೊಂಡೆ. ಸಿನಿಮಾ ತುಂಬಾ ಚೆನ್ನಾಗಿ ಇದೆ. […]
45 ವರ್ಷಗಳ LDF ಆಡಳಿತ ಅಂತ್ಯ: ತಿರುವನಂತಪುರಂ ಪಾಲಿಕೆ ಬಿಜೆಪಿ ತೆಕ್ಕೆಗೆ

ತಿರುವನಂತಪುರಂ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ರಾಜಧಾನಿ ತಿರುವನಂತಪುರಂ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್ಡಿಎ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರತಿನಿಧಿಸುವ ಸಂಸದೀಯ ಕ್ಷೇತ್ರದಲ್ಲಿ ಬರುವ ತಿರುವನಂತಪುರಂ ಮಹಾನಗರ ಪಾಲಿಕೆಯು ಬಹಳ ಹಿಂದಿನಿಂದಲೂ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಅಥವಾ ಎಲ್ಡಿಎಫ್ ಪ್ರಾಬಲ್ಯವನ್ನು ಹೊಂದಿತ್ತು. ಎನ್ಡಿಎ ಪಾಲಕ್ಕಾಡ್ ಪುರಸಭೆಯಲ್ಲೂ ಮೇಲುಗೈ ಸಾಧಿಸಿದೆ. ಬಿಜೆಪಿ 25 ಸ್ಥಾನಗಳೊಂದಿಗೆ ಪಾಲಕ್ಕಾಡ್ ಪುರಸಭೆಯಲ್ಲಿ ಏಕೈಕ ಅತಿದೊಡ್ಡ […]
UDF ಅಲೆಗೆ ಕೊಚ್ಚಿ ಹೋದ LDF: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ UDFಗೆ ಸ್ಪಷ್ಟ ಬಹುಮತ

ಕೊಟ್ಟಾಯಂ: ಕೇರಳ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಶನಿವಾರ (ಡಿ.13) ಬೆಳಗ್ಗೆ 8ಗಂಟೆಗೆ ಆರಂಭಗೊಂಡಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ, ನಗರ ಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸಿದ್ದು, ಪಂಚಾಯತ್ ಚುನಾವಣೆಯಲ್ಲಿ ಎಲ್ ಡಿಎಫ್ ಮತ್ತು ಯುಡಿಎಫ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿರುವುದಾಗಿ ತಿಳಿಸಿದೆ. ಕೇರಳದಾದ್ಯಂತ ಬಿಗಿ ಬಂದೋಬಸ್ತ್ ನಲ್ಲಿ 244 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ರಾಜ್ಯ ಚುನಾವಣ ಆಯೋಗದ ವೆಬ್ ಸೈಟ್ ಮಾಹಿತಿಯಂತೆ, ಎಲ್ ಡಿಎಫ್ 353 ಗ್ರಾಮ ಪಂಚಾಯತ್ ಸ್ಥಾನಗಳಲ್ಲಿ […]
‘ನಂಗೆ ಮಜಾ ಬೇಕು, ನಿಂಗೆ ಹಣ ಬೇಕು’: ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ. ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ […]
ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ 50% ದಾಟಿದರೆ, ಇತರರು ಉಳಿಯುವುದಿಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ

ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಜನಸಂಖ್ಯಾ ಆಕ್ರಮಣದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಂ ಜನಸಂಖ್ಯೆಯು 50% ದಾಟಿದರೆ, ಇತರ ಸಮುದಾಯಗಳು ಅಳಿಸಿಹೋಗುತ್ತವೆ ಎಂದಿದ್ದಾರೆ. ದಶಕಗಳಿಂದ ನಿಯಂತ್ರಣವಿಲ್ಲದ ವಲಸೆಯಿಂದಾಗಿ ಸ್ಥಳೀಯ ಅಸ್ಸಾಮಿ ಜನಸಂಖ್ಯೆಯು ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ. 2021 ರಲ್ಲಿ ಸುಮಾರು 38% ಇದ್ದ ಮುಸ್ಲಿಂ ಜನಸಂಖ್ಯೆಯು, 1961 ರಿಂದ ಸ್ಥಿರವಾದ 4-5% ದಶಕದ ಬೆಳವಣಿಗೆ ದರದಿಂದಾಗಿ 2027 ರ ವೇಳೆಗೆ 40% ತಲುಪಬಹುದು ಎಂದು ಅವರು ಅಂಕಿಅಂಶಗಳನ್ನು ಉಲ್ಲೇಖಿಸಿ ತಿಳಿಸಿದರು. ಮುಸ್ಲಿಂ […]
ಗಂಡ ದುಬೈಯಲ್ಲಿ, ಪತ್ನಿ ನಶಾ ಲೋಕದಲ್ಲಿ: ಖಾಕಿ ಬಲೆಗೆ ನಶೆರಾಣಿ ಬಿದ್ದಿದ್ದೇಗೆ?

ತುಮಕೂರು: ಹೊಸವರ್ಷ 2026ಕ್ಕೆ ಕೌಂಟ್ಡೌನ್ ಶುರುವಾಗಿದೆ. ಇದಕ್ಕೆಂದೇ ಬೆಂಗಳೂರಿನಲ್ಲಿ ಭಾರಿ ತಯಾರಿ ನಡೆದಿದ್ದು, ಸಿಟಿ ಪಾರ್ಟಿ ಹಬ್ ಆಗಿ ಬದಲಾಗುತ್ತಿದೆ. ಈ ನಡುವೆ ಮಾದಕ ಜಗತ್ತಿನ ಚಟುವಟಿಕೆಗಳೂ ಗರಿಗೆದರಿದ್ದು, ಬೆಂಗಳೂರು ಬಿಟ್ಟು ತುಮಕೂರಿನತ್ತ ಒಂದಷ್ಟು ಡ್ರಗ್ ಡೀಲರ್ಗಳು ಎಂಟ್ರಿ ಕೊಟ್ಟಿದ್ದಾರೆ. ಮಾಹಿತಿಯ ಆಧಾರದಲ್ಲಿ ಅಲರ್ಟ್ ಆಗಿರೋ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಹತ್ತಕ್ಕೂ ಅಧಿಕ ಪೆಡ್ಲರ್ಗಳನ್ನು ಲಾಕ್ ಮಾಡಿದ್ದಾರೆ. ತುಮಕೂರು ನಗರ ಪೊಲೀಸರು ಆಯಿಷಾ ಎಂಬ ಮಹಿಳೆ ಸೇರಿ ಆಕೆಯ ಗ್ಯಾಂಗ್ ಹೆಡೆಮುರಿ ಕಟ್ಟಿದ್ದು, ಒಂದು ಲಕ್ಷ ಮೌಲ್ಯದ […]
ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್: 2028ರ ಒಲಿಂಪಿಕ್ಸ್ನಲ್ಲಿ ಅಖಾಡಕ್ಕಿಳಿಯುವುದಾಗಿ ಘೋಷಣೆ

ನವದೆಹಲಿ: ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 150 ಗ್ರಾಂ ಹೆಚ್ಚುವರಿ ತೂಕದಿಂದ ಪದಕ ವಂಚಿತರಾಗಿದ್ದ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಇದ್ದಕ್ಕಿದ್ದಂತೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದರು. ಕೂದಲೆಳೆ ಅಂತರದಲ್ಲಿ ಪದಕ ವಂಚಿತರಾದ ನಿರಾಶೆಯಿಂದ ಈ ಆಘಾತಕ್ಕಾರಿ ನಿರ್ಧಾರ ತೆಗೆದುಕೊಂಡಿರು. ಇದೀಗ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದು, ಮತ್ತೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಹೌದು.. 2028 ರ ಲಾಸ್ಏಂಜಲೀಸ್ ಒಲಿಂಪಿಕ್ಸ್ನತ್ತ ಚಿತ್ತ ಹರಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನ ಹಂಚಿಕೊಂಡಿದ್ದಾರೆ ಪ್ಯಾರಿಸ್ ಬಳಿಕ ಎಲ್ಲವೂ […]
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ: ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಪತ್ರ

ನವದೆಹಲಿ: ಕಾಂಗ್ರೆಸ್ನಲ್ಲಿ ಎಲ್ಲೆಡೆ ಕೋಲಾಹಲ ಶುರುವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಅಲುಗಾಡುತ್ತಿದ್ದರೆ, ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರ್ಚಗೂ ಆಪತ್ತು ಎದುರಾಗಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ಕೂಗು ಕೇಳಿಬರುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಬದಲು ಪ್ರಿಯಾಂಕಾ ವಾದ್ರಾ ಗಾಂಧಿಯನ್ನು ಕರೆತರಲು ಹೋರಾಟ ಆರಂಭಗೊಂಡಿದೆ. ಕಾಂಗ್ರೆಸ್ ಮುನ್ನಡೆಸಲು ಗಾಂಧಿ ಕುಟುಂಬವೇ ಬೇಕು ಎಂಬ ಜೋರಾದ ಕೂಗು ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಮಾಜಿ ಶಾಸಕ ಮೊಹಮ್ಮದ್ ಮೊಖಿಮ್ ಪತ್ರ ಬರೆದಿದ್ದಾರೆ.ಸೋನಿಯಾ ಗಾಂಧಿಗೆ ಪತ್ರ […]
ಬೆಳ್ತಂಗಡಿ | ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

ಬೆಳ್ತಂಗಡಿ: ಅಂಗಡಿಗೆ ಬರುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಂಗಡಿ ಮಾಲಕನೊಬ್ಬನ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. ಟಿಕ್ಕಾ ಮುಹಮ್ಮದ್ ಗೇರುಕಟ್ಟೆ ಎಂಬಾತ ಆರೋಪಿಯಾಗಿದ್ದು, ಆತನ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೊಂದ ಬಾಲಕಿ ಅಂಗಡಿಗೆ ಹೋದಾಗ ಆರೋಪಿಯು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಆರೋಪಿಸಲಾಗಿದೆ. ಮೂರ್ನಾಲ್ಕು ಬಾರಿ ಇದೇ ರೀತಿ ದೌರ್ಜನ್ಯ ಎಸಗಿರುವ ಆರೋಪಿ, ಈ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಚಳಿ: ಸಾಂಕ್ರಾಮಿಕ ರೋಗದ ಎಚ್ಚರ ಇರಲಿ

►’ಜಿಲ್ಲೆಯಲ್ಲಿ ಸರಾಸರಿ 2 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶ ಇಳಿಕೆ’ ಮಂಗಳೂರು: ಕರಾವಳಿ ಭಾಗದಲ್ಲಿ ಬೆಳಗ್ಗಿನ ಜಾವ ಚಳಿಯ ಪ್ರಮಾಣದಲ್ಲಿ ಏರಿಕೆ ಉಂಟಾಗುತ್ತಿದೆ. ಇದರಿಂದ ವಾತಾವರಣ ತಂಪಾಗಿದ್ದು, ಸಾಂಕ್ರಾಮಿಕ ರೋಗಬಾಧೆ ಬಗ್ಗೆ ಎಚ್ಚರದಿಂದ ಇರಬೇಕಾದ ಅನಿವಾರ್ಯತೆ ಇದೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯ ಬಳಿಕ ಚಳಿ ಏರಿಕೆಯಾಗಿದ್ದು, ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ಸಾಕಷ್ಟು ಏರಿಳಿತ ಉಂಟಾಗುತ್ತಿದೆ. ಬೆಳಗ್ಗಿನ ಹೊತ್ತು ಬಿಸಿಲು ಕಾಣಿಸಿದ್ದರೂ ಕೂಡ ಮಧ್ಯಾಹ್ನದವರೆಗೆ ವಾತಾವರಣ ಸ್ವಲ್ಪ ಮಟ್ಟಿಗೆ ತಂಪಾಗಿರುತ್ತದೆ. ಬಳಿಕ ತುಸು […]