Flash News

ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ವಿಡಿಯೋ ಕಾಲ್ ಲೈವ್ ನಲ್ಲೇ ಆತ್ಮಹತ್ಯೆಗೆ ಶರಣಾದ ಮುನ್ನಿ!

ಬಳ್ಳಾರಿ: 23 ವರ್ಷದ ಮಹಿಳೆಯೊಬ್ಬಳು ವಿಡಿಯೋ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಹುಸೇನ್‌ ನಗರದಲ್ಲಿ ನಡೆದಿದೆ. ಮುನ್ನಿ (23) ಆತ್ಮಹತ್ಯೆಗೆ ಶರಣಾದ ಮಹಿಳೆ. ಮದುವೆಯಾಗಿ ಎರಡು ಮಕ್ಕಳನ್ನ ಹೊಂದಿದ್ದ ಮುನ್ನಿ ಆರು ತಿಂಗಳಿಂದ ಪತಿಯಿಂದ ದೂರ ಇದ್ದಳು. ಈ ಮಧ್ಯೆ ವಿವಾಹಿತ ಮೊಹಮ್ಮದ್‌ ಶೇಕ್ ಪ್ರೀತಿಗೆ ಬಿದ್ದಿದ್ದಳು. ಮುನ್ನಿಗೆ ಶೇಖ್ ಸಂಬಂಧದಲ್ಲಿ ಅಣ್ಣ ಆಗಿದ್ದರೂ ಇಬ್ಬರು ಪ್ರೀತಿ ಮಾಡುತ್ತಿದ್ದರು. ಪ್ರೀತಿಯ ನಂತರ ನನ್ನನ್ನು ಮದುವೆಯಾಗು ಎಂದು ಮುನ್ನಿ ಒತ್ತಾಯ ಮಾಡುತ್ತಿದ್ದಳು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುನ್ನಿ […]

ದುಬೈನ ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ಫೋಟೋ ವೈರಲ್

ಕೆಲ ದಿನಗಳ ಹಿಂದೆ ಅರಬ್‌ ದೇಶಗಳಲ್ಲಿ ಹಿಮಾಲಯದಂತೆ ಮಂಜು ಬಿದ್ದು ಅಚ್ಚರಿ ಸೃಷ್ಟಿಸಿತ್ತು. ಅದಕ್ಕೂ ಮೊದಲು ಮಳೆಯೇ ಇಲ್ಲದ ಆ ಮರಳುಗಾಡಿನಲ್ಲಿ ಧಾರಾಕಾರ ಮಳೆ ಸುರಿದು ಪ್ರವಾಹ ಸೃಷ್ಟಿಯಾದಂತಹ ಘಟನೆ ನಡೆದಿದ್ದವು. ಈಗ ಮತ್ತೊಂದು ಅಚ್ಚರಿ ಎಂಬಂತೆ ಅಲ್ಲಿನ ವಿಶ್ವ ವಿಖ್ಯಾತ ಬುರ್ಜ್‌ ಖಲೀಫಾಗೆ ಸಿಡಿಲು ಬಡಿದಿದ್ದು, ಈ ಸಿಡಿಲಿನ ಬೆಳಕು ಸೊಗಸಾದ ಚಿತ್ತಾರ ಸೃಷ್ಟಿಸಿದೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಿದೆ. ಒಮನ್ ದೊರೆ ಶೇಕ್ ಹಮ್ದನ್ ಬಿನ್ ಮೊಹಮ್ಮದ್ ಬಿನ್ […]

Mangaluru | ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರಿಂದ ತಡೆ, ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗವನ್ನು ಖಂಡಿಸಿ ಮಂಗಳೂರಿನ ಬಿಜೆಪಿ ಕಚೇರಿಗೆ ಘೇರಾವ್ ಹಾಕಲು ಮುಂದಾದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಇಂದು ವಶಕ್ಕೆ ಪಡೆದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (MGNREGA) ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ವಿರೋಧಿಸಿದರು. ಅಲ್ಲದೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ […]

ಕಿಚ್ಚು ಹಚ್ಚಿದ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿದ ಮಾತು: ದರ್ಶನ್ ಪತ್ನಿ ವಿಜಯಲಕ್ಷ್ಮಿ ಗುಡುಗು

ಕನ್ನಡ ಚಿತ್ರರಂಗದಲ್ಲಿ ಈ ತಲೆಮಾರಿನ ಹೀರೋಗಳ ನಡುವೆ ಕುಚಿಕ್ಕು ಗೆಳೆಯರೆಂದೇ ಪ್ರಸಿದ್ಧರಾಗಿದ್ದವರು ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್. ಆದರೆ ಈ ಸ್ನೇಹ ಕಳೆದ ಎಂಟೂವರೆ ವರ್ಷಗಳಿಂದ ಗ್ರಹಣ ಕವುಚಿಕೊಂಡಂತೆ ಮಂಕಾಗಿದೆ. ಒಂದು ವೇಳೆ ರೆಬೆಲ್ ಸ್ಟಾರ್ ಅಂಬರೀಶ್ ಇಂದು ಜೀವಂತವಾಗಿದ್ದಿದ್ದರೆ ಪರಸ್ಪರ ವಿರುದ್ಧ ದಿಕ್ಕುಗಳಂತಾಗಿದ್ದ ಸುದೀಪ್ ಮತ್ತು ದರ್ಶನ್ ಮತ್ತೆ ಒಂದೇ ಬಿಂದುವಿನಲ್ಲಿ ಸಂಧಿಸೋ ಕಾಲ ಕೂಡಿರುತ್ತಿತ್ತು. ಯಾಕೆಂದರೆ, ಅಂಬರೀಶ್ ಅವರಿಗೆ ಇಬ್ಬರನ್ನೂ ಮತ್ತೆ ಜೊತೆಯಾಗಿ ನೋಡಬೇಕೆಂಬ ಹೆಬ್ಬಯಕೆ ಇತ್ತು. ಆದರೆ ಕೊನೆಯವರೆಗೆ ಅದಾಗಲೇ […]

ಭಾರತ ಹಿಂದೂರಾಷ್ಟ್ರ, ಈ ಸತ್ಯಕ್ಕೆ ಸಂವಿಧಾನಾತ್ಮಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಕೊಲ್ಕತ್ತಾ: ಭಾರತ ಹಿಂದೂರಾಷ್ಟ್ರ. ಈ ಸತ್ಯಕ್ಕೆ ಸಂವಿಧಾನಾತ್ಮಕ ಅನುಮೋದನೆಯ ಅಗತ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರೆಸ್ಸೆಸ್ ಶತಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಈಗಲೂ ಹಿಂದೂರಾಷ್ಟ್ರ. ಭಾರತೀಯ ಸಂಸ್ಕೃತಿ ಇರುವವರೆಗೂ ಹಿಂದೂರಾಷ್ಟ್ರವಾಗಿಯೇ ಮುಂದುವರಿಯಲಿದೆ ಎಂದು ಹೇಳಿದರು. “ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ. ಯಾವಾಗದಿಂದ ಇದು ಘಟಿಸುತ್ತಿದೆ ಎನ್ನುವುದು ನಮಗೆ ಗೊತ್ತಿಲ್ಲ. ಆದ್ದರಿಂದ ಇದಕ್ಕೂ ಸಂವಿಧಾನಾತ್ಮಕ ಅನುಮೋದನೆ ಬೇಕೇ? ಹಿಂದೂಸ್ತಾನ ಎನ್ನುವುದು ಹಿಂದೂ ದೇಶ. ಭಾರತ ನಮ್ಮ ಮಾತೃಭೂಮಿ ಎಂದು ಪರಿಗಣಿಸಿ ಭಾರತೀಯ […]

Uppinangady: ಜೇನು ಕೃಷಿ ಕಲಿಸುವೆನೆಂದು ಬಾಲಕಿ ಮೇಲೆ ಅತ್ಯಾಚಾರ

ಉಪ್ಪಿನಂಗಡಿ: ಬೆಳಗಾವಿ ಮೂಲದ ಕೂಲಿ ಕಾರ್ಮಿಕ ಕುಟುಂಬವೊಂದರ 13ರ ಹರೆಯದ ಬಾಲಕಿಯನ್ನು ಜೇನು ಕೃಷಿ ಕಲಿಸಿಕೊಡುವೆನೆಂದು ತನ್ನ ಮನೆಯಲ್ಲಿರಿಸಿ ನಿರಂತರ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ 34ನೇ ನೆಕ್ಕಿಲಾಡಿಯ ಬೇರಿಕೆ ನಿವಾಸಿ ಅಬ್ದುಲ್‌ ಗಫ‌ೂರ್‌ (50) ಎಂಬಾತನನ್ನು ಪೋಕ್ಸೋ ಕಾಯಿದೆಯಡಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೂಲಿ ಕೆಲಸಕ್ಕೆಂದು ಬಂದು ಪರಿಸರದಲ್ಲಿ ವಾಸವಾಗಿದ್ದ ಕುಟುಂಬವೊಂದರ ಬಾಲಕಿಗೆ ಜೇನು ಕೃಷಿ ಕಲಿಸಿಕೊಡುವ ಭರವಸೆ ನೀಡಿ ಆರೋಪಿಯು ತನ್ನ ಮನೆಯಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಿದ್ದ. ಬಾಲಕಿಯ ಹೆತ್ತವರು ಆರೋಪಿಯನ್ನು […]

ನಿಧಿ ಅಗರ್ವಾಲ್ ಬೆನ್ನಲ್ಲೇ ನಟಿ ಸಮಂತಾಗೆ ಮೇಲೆ ಮುಗಿಬಿದ್ದ ಫ್ಯಾನ್ಸ್, ಹುಚ್ಚಾಟದ ದೃಶ್ಯ ಸೆರೆ

ಹೈದರಾಬಾದ್: ಸಿನಿಮಾ ನಟ ನಟಿಯರ ಮೇಲಿನ ಅಭಿಮಾನ ಒಂದು ಹಂತದವರೆಗೆ ಉತ್ತಮ. ಆದರೆ ಅತಿರೇಖದ ಅಭಿಮಾನ ಇದೀಗ ಹಲವೆಡೆ ವ್ಯಕ್ತವಾಗುತ್ತಿದೆ. ಈ ಪೈಕಿ ಹೈದರಾಬಾದ್‌ನಲ್ಲಿ ಪದೇ ಪದೇ ಅಭಿಮಾನಿಗಳಿಂದ ಅತಿರೇಖದ ವರ್ತನೆಗಳು ವರದಿಯಾಗುತ್ತಿದೆ. ಇತ್ತೀಚೆಗೆ ನಟಿ ನಿಧಿ ಅಗರ್ವಾಲ್ ಮೇಲೆ ಅಭಿಮಾನಿಗಳು ತೋರಿದ ಅತೀರೇಖದ ವರ್ತನೆ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ನಟಿ ಸಮಂತ್ ರುತ್ ಪ್ರಭು ಮೇಲೆ ಅಭಿಮಾನಿಗಳು ಮುಗಿ ಬಿದ್ದ ಘಟನೆ ನಡೆದಿದೆ. ಫ್ಯಾನ್ಸ್‌ನಿಂದ ನಟಿ ಸಮಂತಾ ಸುರಕ್ಷಿತವಾಗಿ ಹೊರತರಲು […]

Mangaluru | SDPI ಪ್ರತಿಭಟನಾ ವೀಡಿಯೊದಲ್ಲಿ ತಪ್ಪು ಮಾಹಿತಿ ಆರೋಪ: ಸ್ವಯಂಪ್ರೇರಿತ ದೂರು ದಾಖಲು

ಮಂಗಳೂರು: ಎಸ್‌ಡಿಪಿಐ ಮಂಗಳೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯ ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ನಂತರ ಪೊಲೀಸರು ಸ್ವಯಂಪ್ರೇರಿತ ದೂರನ್ನು ದಾಖಲಿಸಿದ್ದಾರೆ. ವೀಡಿಯೊ ತುಣುಕುಗಳಲ್ಲಿ ದಾರಿತಪ್ಪಿಸುವ ಮಾಹಿತಿ ಮತ್ತು ನ್ಯಾಯಾಲಯದ ತೀರ್ಪುಗಳ ಆಯ್ದ ಉಲ್ಲೇಖಗಳಿವೆ ಎಂದು ಆರೋಪಿಸಲಾಗಿದೆ. ಪೊಲೀಸ್ ಪತ್ರಿಕಾ ಪ್ರಕಟಣೆಯ ಪ್ರಕಾರ, ಡಿಸೆಂಬರ್ 19, ಶುಕ್ರವಾರ ಮಂಗಳೂರಿನಲ್ಲಿ ಎಸ್‌.ಡಿ.ಪಿ.ಐ ಪ್ರತಿಭಟನಾ ಸಭೆ ನಡೆಸಲಾಗಿತ್ತು. ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ, ಅಧಿಕಾರಿಗಳು ವಿಷಯವನ್ನು ಪರಿಶೀಲಿಸಿದಾಗ, ಕೆಲವು ಹೇಳಿಕೆಗಳು ವಿವಿಧ ನ್ಯಾಯಾಲಯಗಳು ನೀಡಿದ […]

ಮಹಿಳೆಯರಿಗೆ ಸಿಹಿ ಸುದ್ದಿ: ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

ಬೆಂಗಳೂರು: ರಾಜ್ಯದ ಪ್ರತಿ ಮನೆ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ʻಗೃಹಲಕ್ಷ್ಮಿʼಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ ಹೆಸರು ಹೇಳಲ್ಲ. ಈಗಾಗಲೇ ಆರ್ಥಿಕ ಇಲಾಖೆ ಅವರು ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸೋಮವಾರದಿಂದ (ಡಿ.22) ಮುಂದಿನ ಶನಿವಾರದ ಒಳಗೆ 24ನೇ ಕಂತಿನ ಹಣ […]

ಸಮುದಾಯದ ಆಧಾರದ ಮೇಲೆ ಪ್ರಕರಣ ದಾಖಲಿಸುತ್ತಿಲ್ಲ: SDPI ಆರೋಪಕ್ಕೆ ಪೊಲೀಸ್ ಕಮಿಷನರ್ ಸ್ಪಷ್ಟನೆ

ಮಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದಲ್ಲಿ ಸತ್ಯಗಳನ್ನು ಮರೆಮಾಚಿಸಬೇಡಿ. ಪ್ರಚೋದನಾಕಾರಿ ಭಾಷಣ ಮೂಲಕ ಮುಗ್ಧ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ನಾವು ಯಾವುದೇ ಘಟನೆಯಲ್ಲೂ ಸಮುದಾಯಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸುವುದಿಲ್ಲ. ವಾಸ್ತವಾಂಶಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಎಸ್‌ಡಿಪಿಐ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯ ವೇಳೆ ಭಾಷಣಕಾರರು ಪೊಲೀಸರು ಪ್ರಕರಣ ದಾಖಲಿಸುವಾಗ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದರು. […]