Flash News

ವಿಟ್ಲ | ಸಂಪ್ರದಾಯ ನೆಪದಲ್ಲಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದ್ದ ಅಶೋಕ ರೈ: ಕಾನೂನು ಬಾಹಿರ ಕೃತ್ಯವೆಂದು ಪ್ರಕರಣ ದಾಖಲು

ವಿಟ್ಲ: ಕೇಪು ಗ್ರಾಮದಲ್ಲಿ ಅನುಮತಿ ರಹಿತ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದು, ಅಕ್ರಮಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್‌ ಕುಮಾರ್ ರೈ ಸೇರಿದಂತೆ ಒಟ್ಟು 17 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶನಿವಾರ (ಡಿ.20) ಮಧ್ಯಾಹ್ನ ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ […]

ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ‘ರಹದಾರಿ’: ಪ್ರಧಾನಿ ಮೋದಿ

ಕೋಲ್ಕತ್ತಾ: ಇತ್ತೀಚಿಗೆ ಮುಕ್ತಾಯವಾದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ರಹದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ದಟ್ಟವಾದ ಮಂಜು ಕವಿದಿದ್ದರಿಂದ ಕಡಿಮೆ ಗೋಚರತೆಯಿಂದಾಗಿ ಪಶ್ಚಿಮ ಬಂಗಾಳದ ತಾಹೆರ್ ಪುರ ಹೆಲಿಪ್ಯಾಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ವಿಫಲವಾದ ನಂತರ ವರ್ಚಯಲ್ ಮೂಲಕ ಬಿಜೆಪಿ ರಾಜಕೀಯ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ದೇಶವು ಕ್ಷಿಪ್ರ ಅಭಿವೃದ್ಧಿಯನ್ನು ಬಯಸುತ್ತಿದೆ. ಬಿಹಾರ ಮತ್ತೊಮ್ಮೆ ಎನ್‌ಡಿಎ ಸರ್ಕಾರಕ್ಕೆ ಅಭಿವೃದ್ಧಿಗಾಗಿ ಬೃಹತ್ […]

ಡಿ.21ರಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ‘ಕ್ರೀಡೋತ್ಸವ’: ಪ್ರಭಾಕರ ಭಟ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ 2025ನೇ ಸಾಲಿನ ಹೊನಲು-ಬೆಳಕಿನ ಕ್ರೀಡೋತ್ಸವವು ಡಿ.21ರಂದು ಸಂಜೆ 6ರಿಂದ ಸಂಸ್ಥೆಯ ವಿದ್ಯಾರ್ಥಿಗಳ ಹಲವು ಬಗೆಯ ಸಾಹಸಮಯ ಪ್ರದರ್ಶನಗಳೊಂದಿಗೆ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ. ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, . ಪ್ರತಿವರ್ಷ ನಡೆಯುವ ಕ್ರೀಡಾಕೂಟದಲ್ಲಿ ಮಕ್ಕಳ ಸಾಹಸಮಯ ಪ್ರದರ್ಶನವು ಶಿಕ್ಷಣ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಬಾರಿ ಸುಮಾರು 4 ಸಾವಿರದಷ್ಟು ಮಕ್ಕಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಶು ನೃತ್ಯ, ಸಂಚಲನ, […]

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಕ್ರೂರ ಹತ್ಯೆ: 7 ಮಂದಿ ಅರೆಸ್ಟ್‌, ಮೊಹಮ್ಮದ್‌ ಯೂನಸ್‌ ಹೇಳಿಕೆ

ಢಾಕಾ: ಬಾಂಗ್ಲಾದೇಶದ ಮೈಮನ್‌ಸಿಂಗ್ ಜಿಲ್ಲೆಯ ಭಾಲುಕಾ ಪ್ರದೇಶದಲ್ಲಿ ನಡೆದ ಹಿಂದೂ ಯುವಕನ ಕ್ರೂರ ಹತ್ಯೆ ಪ್ರಕರಣ ಸಂಬಂಧ 7 ಮಂದಿಯನ್ನ ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ ದೃಢಪಡಿಸಿದ್ದಾರೆ. ದೀಪು ಚಂದ್ರ ದಾಸ್ ಎನ್ನುವ ಗಾರ್ಮೆಂಟ್‌ ಕಾರ್ಖಾನೆ ಕಾರ್ಮಿಕನನ್ನ ಗುರುವಾರ ರಾತ್ರಿ ಸ್ಥಳೀಯರ ಗುಂಪೊಂದು ಥಳಿಸಿ ಕೊಂದಿತ್ತು. ಪ್ರವಾದಿ ಮೊಹಮ್ಮದ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನೆಂದು ಆರೋಪಿಸಿ ಸ್ಥಳೀಯ ನಿವಾಸಿಗಳ ಗುಂಪು ಹತ್ಯೆ ಮಾಡಿತ್ತು. ಬಳಿಕ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿತ್ತು ಎಂದು ಪೊಲೀಸರು […]

ಸಿರಿಯಾದ ಐಸಿಸ್ ನೆಲೆಗಳ ಮೇಲೆ ಅಮೆರಿಕದಿಂದ ವಾಯು ದಾಳಿ, ಹೊಸ ಯುದ್ಧಕ್ಕೆ ನಾಂದಿ ಹಾಡಿದರೇ ಟ್ರಂಪ್?

ಸಿರಿಯಾ: ಅಮೆರಿಕವು ಮಧ್ಯರಾತ್ರಿ ಸಿರಿಯಾದ 70 ಐಸಿಸ್ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಲ್ಲಿ ಅಮೆರಿಕದ ಸೈನಿಕರ ಮೇಲಿನ ದಾಳಿಯ ನಂತರ ಅಮೆರಿಕವು ಈ ಪ್ರತೀಕಾರದ ಕ್ರಮವನ್ನು ಕೈಗೊಂಡಿದೆ. ಅಮೆರಿಕದ ಅಧಿಕಾರಿಗಳ ಪ್ರಕಾರ, ಕಳೆದ ವಾರ ಅಮೆರಿಕದ ಮಿಲಿಟರಿ ಸಿಬ್ಬಂದಿಯ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದರು. ಡಿಸೆಂಬರ್ 13 ರಂದು ಮಧ್ಯ ಸಿರಿಯಾದ ಪಾಲ್ಮಿರಾ ಪ್ರದೇಶದಲ್ಲಿ ಅಮೆರಿಕ […]

ನಿಮ್ಮಪ್ಪನಾಣೆ ನೀವು ಅಧಿಕಾರಕ್ಕೆ ಬರುವುದಿಲ್ಲ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗು

ಬೆಳಗಾವಿ: ನಾಯಕತ್ವ ಬದಲಾವಣೆ ವಿಷಯ ಚರ್ಚೆ ನಡೆಯುತ್ತಿದ್ದಾಗ ಸಚಿವರು ಹಾಗೂ ಕಾಂಗ್ರೆಸ್ ಸದಸ್ಯರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತರು. ‘ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಈ ಚರ್ಚೆಯೇ ಅನವಶ್ಯಕ’ ಎಂದು ಪ್ರತಿಪಾದಿಸಿದರು. ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಆರ್‌.ವಿ. ದೇಶಪಾಂಡೆ, ‘ಎರಡೂವರೆ ವರ್ಷ ಎಂಬುದೆಲ್ಲ ಇಲ್ಲ. ಉಳಿದೆಲ್ಲವೂ ಅನವಶ್ಯಕ ಚರ್ಚೆ. ಇದನ್ನು ಇಲ್ಲಿಗೆ ನಿಲ್ಲಿಸಿ’ ಎಂದು ಸಲಹೆ ನೀಡಿದರು. ಅವರಿಗೆ ದನಿಗೂಡಿಸಿದ ಕಾಂಗ್ರೆಸ್‌ನ ಅಪ್ಪಾಜಿ ಸಿ.ಎಸ್‌. ನಾಡಗೌಡ, ‘ಮುಖ್ಯಮಂತ್ರಿ ಸ್ಥಾನ ಬದಲಾವಣೆ […]

ಉದ್ಯಮಿ ಮನೆಮುಂದೆ ಬಿಜೆಪಿ ಕಾರ್ಯಕರ್ತೆ ನಿಗೂಢ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದ ಕುಟುಂಬಸ್ಥರು

ಕಲಬುರಗಿ: ಜಿಲ್ಲೆಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ವರದಿಯಾಗಿದೆ. ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ಆದರೆ, ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಜ್ಯೋತಿ ಪಾಟೀಲ್ ಅವರು ನಂದಿಕೂರ ಗ್ರಾಮದ ನಿವಾಸಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿನಾಥ್ […]

ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ!

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮಾಸ್ಕ್​ ಮ್ಯಾನ್ ಚಿನ್ನಯ್ಯ ಜೈಲಿನಿಂದ ಹೊರಬಂದಕೂಡಲೇ ಹೊಸ ಬುರುಡೆ ಬಿಡುತ್ತಿದ್ದಾನೆ. ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ತಕ್ಷಣವೇ ಪೊಲೀಸ್ ಠಾಣೆಗೆ ಹಾಜರಾದ ಚಿನ್ನಯ್ಯ, ತಮಗೂ ಹಾಗೂ ಪತ್ನಿಗೂ ಜೀವ ಬೆದರಿಕೆ ಇರುವುದಾಗಿ ಹೋರಾಟಗಾರರ ವಿರುದ್ಧವೇ ದೂರು ನೀಡಿದ್ದಾನೆ. ಬುರುಡೆ ಪ್ರಕರಣದಲ್ಲಿ ನಾಲ್ಕು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ ನವೆಂಬರ್ 24ರಂದು ಜಾಮೀನು ಸಿಕ್ಕಿತ್ತು. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು […]

ಪ್ರವೀಣ್ ಪೂಜಾರಿಯನ್ನು ಕೊಲೆ ಮಾಡಿದ್ದು ಹಿಂದೂ ಜಾಗರಣ ಸಮಿತಿಯವರು: ಬಿಕೆ ಹರಿಪ್ರಸಾದ್ ಅಬ್ಬರ

ಬೆಳಗಾವಿ: ವಿಧಾನ ಪರಿಷತ್‌ನಲ್ಲಿ ಬಿಕೆ ಹರಿಪ್ರಸಾದ್ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಪ್ರವೀಣ್ ಪೂಜಾರಿಯನ್ನು ಕೊಲೆ ಮಾಡಿದ್ದು ಹಿಂದೂ ಜಾಗರಣ ಸಮಿತಿಯವರು ಎಂದು ಆಕ್ರೋಶ ವ್ಯಕ್ತಪಡಿಸಿದರು. ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ ಬಗ್ಗೆ ಸದನದಲ್ಲಿ ಬಿಕೆ ಹರಿಪ್ರಸಾದ್ ಭಾಷಣ ಮಾಡಿ, ”ಗಾಂಧಿಯನ್ನು ಕೊಲೆ ಮಾಡಿದವನನ್ನು ಇನ್ನೂ ಕೊಲೆಗಾರ ಅನ್ನಲ್ಲ”, ”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಭಾಷಣ ಮಾಡುವ ಬಿಜೆಪಿಯ ಗುರುವಿನ ಮೇಲೆ 13 ಕೇಸ್ ಇದೆ” ಪ್ರವೀಣ್ ಪೂಜಾರಿಯನ್ನು ಕೊಲೆ […]

ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ

ಶೋಭಾ ಕರಂದ್ಲಾಜೆಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಅಂಗೀಕೃತಗೊಂಡ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ-2025 ಗಂಭೀರ ಸಾಂವಿಧಾನಿಕ ಕಳವಳಗಳನ್ನು ಹುಟ್ಟುಹಾಕಿದೆ. ಈ ಮಸೂದೆಯನ್ನು ಸಂವಿಧಾನದ ಆರ್ಟಿಕಲ್‌ 200ರ ಅಡಿಯಲ್ಲಿ, ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಬೇಕು ಎಂಬ ಒತ್ತಾಯಗಳು ಎದ್ದಿವೆ. ಇದು ದ್ವೇಷ ಭಾಷಣ ಮತ್ತು ಅಪರಾಧಗಳನ್ನು ತಡೆಯುವ ಉದ್ದೇಶ ಹೊಂದಿದ್ದರೂ, ಇದರಿಂದ ಪ್ರಜಾಪ್ರಭುತ್ವದ ಸ್ವಾತಂತ್ರ್ಯಗಳಿಗೆ ಧಕ್ಕೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಈ ಮಸೂದೆಯನ್ನು ಸೂಕ್ಷ್ಮವಾಗಿ ಪರೀಕ್ಷಿಸಿದಾಗ, ಇದು ಸರ್ಕಾರಿ […]