Flash News

ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು; ಮತ್ತೊಮ್ಮೆ ನೋಟೀಸ್ ಜಾರಿ ಮಾಡಿದ ಪುತ್ತೂರು ವಿಭಾಗಾಧಿಕಾರಿ

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಇದೀಗ ಅವರು 1 ಲಕ್ಷ ಬಾಂಡ್​​ ನೀಡಿ. ಜೈಲಿನಿಂದ ಹೊರ ಬಂದಿದ್ದಾರೆ. ಇದರ ಬೆನ್ನಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರಿ ನೋಟಿಸ್​​ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ಗಡಿಪಾರು ಮಾಡಲು ಆದೇಶ ನೀಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ನೀಡಿದ್ದಾರೆ. ಮೊನ್ನೆಯಷ್ಟೇ ತಿಮರೋಡಿಗೆ ಗಡಿಪಾರು ನೋಟೀಸ್ […]

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು: ಬೆಳಗಾವಿ ಸರ್ಕ್ಯೂಟ್ ಹೌಸ್​​ಗೆ ದೌಡಾಯಿಸಿದ ನಾಯಕರು

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಗ್ಯದಲ್ಲಿ ಏರುಪೇರು ಆಗಿದೆ. ಈ ಹಿನ್ನಲೆಯಲ್ಲಿ ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಶಾಸಕರು, ಸಚಿವರುಗಳು ಸರ್ಕ್ಯೂಟ್ ಹೌಸ್​​ಗೆ ದೌಡಾಯಿಸಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಬುಧವಾರ ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಹೋಗದೆ […]

ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ: ಬಿಜೆಪಿ ವಕ್ತಾರ ಗೌರವ್ ಭಾಟಿಯಾ

ನವದೆಹಲಿ: ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ, ಸುಮಾರು 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಆರೋಪಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನ್ಯಾಯಾಲಯದ ತೀರ್ಪನ್ನು ಕ್ಲೀನ್ ಚಿಟ್ ಎಂದು ಬಿಂಬಿಸುವ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಆದೇಶವು ಆರೋಪಗಳ ಅರ್ಹತೆಯ ಮೇಲೆ ಅಲ್ಲ, ಕಾನೂನು ಮತ್ತು ತಾಂತ್ರಿಕ ಆಧಾರದ ಮೇಲೆ ನೀಡಲಾಗಿದೆ ಎಂದು ವಾದಿಸಿದ್ದಾರೆ. […]

ಮಂಗಳೂರು ಜೈಲಿನಲ್ಲಿ ಭರತ್ ಕುಮ್ಡೇಲ್’ಗೆ ಅವಾಚ್ಯವಾಗಿ ನಿಂದನೆ: ಕೈದಿಗಳ ಮಧ್ಯೆ ಗದ್ದಲ..!

ಮಂಗಳೂರು: ಮಂಗಳೂರು ಜೈಲಿನಲ್ಲಿ ಕೈದಿಗಳ ಮಧ್ಯೆ ವಾಗ್ವಾದ- ಸಂಘರ್ಷ- ಗದ್ದಲ ನಡೆದಿದ್ದು, ಸಿಸಿಬಿ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿ ಎಲ್ಲವನ್ನು ಸರಿಪಡಿಸಿದ್ದಾರೆ. ಸೋಮವಾರ ಸಂಜೆ ಕೋಕಾ ಆಕ್ಟಿನಡಿ ಬಂಧಿತನಾಗಿರುವ ಭರತ್ ಕುಮ್ಡೇಲ್ ಜೊತೆಗೆ ಮಾತನಾಡಲು ಸಂಬಂಧಿಕರು ಬಂದಿದ್ದರು. ಆತ ಮಾತನಾಡಲು ಹೊರಗಡೆ ಬಂದು ಹಿಂದೆ ತೆರಳುವ ಸಂದರ್ಭದಲ್ಲಿ ಎ ಬ್ಯಾರಕ್ ನಲ್ಲಿರುವ ಕೈದಿಗಳು ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ. ಆನಂತರ, ಈ ವಿಷಯ ತಿಳಿದ ಬಿ ಬ್ಯಾರಕಿನ ಹಿಂದು ಕೈದಿಗಳು ರಂಪ ಮಾಡಿದ್ದು ಎರಡೂ ಕಡೆಯಿಂದ ಅವಾಚ್ಯ ನಿಂದನೆ, […]

ಹಳೆ ವಾಹನ ಹೊಂದಿರುವವರಿಗೆ ಶಾಕ್​​ ಕೊಟ್ಟ ರಾಜ್ಯ ಸರ್ಕಾರ: 15 ವರ್ಷ ಮೀರಿದ ವೆಹಿಕಲ್ಸ್​​ ಜಪ್ತಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್​​ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್​​ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ ಸರ್ಕಾರದ ನೀತಿಯ […]

SIR: ಕಾಸರಗೋಡಿನಲ್ಲಿ 63,114 ಮತದಾರರು ಹೊರಕ್ಕೆ

ಕಾಸರಗೋಡು : ಬಿಹಾರ ನಂತರ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಕೇರಳದಲ್ಲಿ ನಡೆಯುತ್ತಿದ್ದು, ಅಂತಿಮ ಹಂತದಲ್ಲಿದೆ. ಎಸ್‌ಐಆರ್‌ ಕಾರ್ಯವಿಧಾನಗಳು ಕೊನೆಗೊಳ್ಳಲು ಕೆಲವೇ ದಿನಗಳು ಬಾಕಿ ಇದೆ. ಇಲ್ಲಿವರೆಗೆ ಮತದಾರರ ಪಟ್ಟಿಯಿಂದ 25 ಲಕ್ಷಕ್ಕೂ ಹೆಚ್ಚು ಮತದಾರರು ಹೊರಗುಳಿದಿದ್ದು, ಸಿಪಿಎಂ, ಕಾಂಗ್ರೆಸ್‌ ಮತ್ತು ಮುಸ್ಲಿಂ ಲೀಗ್‌ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಪ್ರಸ್ತುತ ಕೇರಳದಲ್ಲಿ ಶೇ.99.96 ಎಸ್‌ಐಆರ್‌ ಅರ್ಜಿ ನಮೂನೆಗಳನ್ನು ಹಿಂತಿರುಗಿಸಲಾಗಿದೆ ಮತ್ತು ಶೇ.99.77 ಡಿಜಿಟಲೀಕರಣಗೊಳಿಸಲಾಗಿದೆ. ಇದರ ಪ್ರಕಾರ ಸುಮಾರು 25 […]

ವೈದ್ಯೆಯೊಬ್ಬರ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್; ಬಿಹಾರ ಮುಸ್ಲಿಂ ಸಚಿವ ಮೊಹಮ್ಮದ್ ಜಮಾ ಖಾನ್ ಸ್ಪಷ್ಟನೆ ಏನು?

ಪಾಟ್ನಾ: ನೇಮಕಾತಿ ಪತ್ರ ಪಡೆಯಲು ಬಂದ ಮುಸ್ಲಿಂ ವೈದ್ಯೆಯ ಹಿಜಾಬ್ ಹಿಡಿದೆಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಲೇ ಅವರ ಪರವಾಗಿ ಅವರದ್ದೇ ಕ್ಯಾಬಿನೆಟ್ ಮುಸ್ಲಿಂ ಸಚಿವರೊಬ್ಬರು ಬ್ಯಾಟ್ ಬೀಸಿದ್ದಾರೆ. ಹೌದು.. ನಿತೀಶ್ ಕುಮಾರ್ ಸಂಪುಟದ ಏಕೈಕ ಮುಸ್ಲಿಂ ಸಚಿವ ಮೊಹಮ್ಮದ್ ಜಮಾ ಖಾನ್ ಅವರು ಹಿಜಾಬ್ ವಿವಾದಕ್ಕೆ ಸ್ಪಷ್ಟನೆ ನೀಡಿದ್ದು, ‘ನಿತೀಶ್ ಕುಮಾರ್ ತಂದೆ ಸ್ವರೂಪರು.. ಮಗಳ ಮೇಲೆ ಪ್ರೀತಿ ತೋರಿದಂತೆ ಆಕೆಯ ಮೇಲೆ ತೋರಿದ್ದಾರೆ. ಇದರಲ್ಲಿ ಅಪಾರ್ಥ ಬೇಡ ಎಂದು ಹೇಳಿದ್ದಾರೆ. […]

Mangalore | ಮಹಿಳೆ ಮೃತಪಟ್ಟ ಪ್ರಕರಣ: ಬಸ್ ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ..!

ಮಂಗಳೂರು: ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ಸೈಯದ್ ಇರ್ಫಾನ್ ಅಲಿಗೆ ಮಂಗಳೂರಿನ ಜೆಎಂಎಫ್‌ಸಿ ಎಂಟನೆ ನ್ಯಾಯಾಲಯವು ಆರು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು 3, 500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಎಂಟು ವರ್ಷಗಳ ಹಿಂದೆ ಬಸ್ ಚಾಲಕನು ತನ್ನ ಬಸ್‌ನ್ನು ಅತಿ ವೇಗದಿಂದ ಚಲಾಯಿಸಿಕೊಂಡು ಬಂದು ತನ್ನ ಮುಂದೆ ನಿಂತಿದ್ದ ಬಸ್‌ನ್ನು ಓವರ್‌ಟೇಕ್ ಮಾಡಿ ನಂತರ ಜಂಕ್ಷನ್ ಬಳಿ ಪದವು ಕಡೆಯಿಂದ ಪಂಪು ವೆಲ್ […]

Mangaluru | ನಸೀಬ್ ಕೆಟ್ಟ ಪೆಡ್ಲರ್‌ಗಳ ಕಾರು: ಟ್ಯಾಂಕರ್ ಗೆ ಕಾರು ಡಿಕ್ಕಿ; ತಪಾಸಣೆ ವೇಳೆ ಕಾರಿನಲ್ಲಿತ್ತು ಲಕ್ಷಾಂತರ ಮೌಲ್ಯದ ಡ್ರಗ್ಸ್

ಉಳ್ಳಾಲ: ತಲಪಾಡಿಯಲ್ಲಿ ಮಂಗಳವಾರ ಮುಂಜಾನೆ ಕಾರೊಂದು ಟ್ಯಾಂಕರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಕಾರಿನೊಳಗೆ ಹಲವಾರು ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಎಂಡಿಎಂಎ ಪತ್ತೆಯಾಗಿದ್ದು, ಘಟನೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಂಗಳವಾರ ಬೆಳಗ್ಗೆ 7.30ರ ವೇಳೆ ಮಂಗಳೂರಿನಿಂದ‌ ಉಪ್ಪಳದ ಕಡೆಗೆ ಧಾವಿಸುತ್ತಿದ್ದ ಕಾರು ತಲಪಾಡಿಯ ಆರ್ ಟಿಓ ಚೆಕ್ ಪೋಸ್ಟ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಹ ಸವಾರ ಆದಮ್‌ ಗಂಭೀರ ಗಾಯಗೊಂಡಿದ್ದಾನೆ. […]

Mangaluru | ಲವ್ ಇದ್ದರೂ ಬೇರೊಬ್ಬನ ಜೊತೆ ಮದುವೆ: ನಿಖಾ ಮುಗಿದು ವಿದೇಶದಿಂದ ಬಂದ ಪ್ರಿಯಕರನೊಂದಿಗೆ ವಧು ಎಸ್ಕೇಪ್

“ರಿಸೆಪ್ಷನ್‌ಗೆ ಬಂದು ಊಟ ಮಾಡಿ ಹೋದ ಬಂಧುಗಳು” ಮಂಗಳೂರು: ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಬಂಟ್ವಾಳದಲ್ಲಿ ನಡೆದಿದೆ. ನನಗೊಬ್ಬನ ಜೊತೆಗೆ ಲವ್ ಇದೆ, ಅವನನ್ನೇ ಮದುವೆ ಆಗುತ್ತೇನೆ, ಬೇರೆ ಮದುವೆ ಬೇಡ ಎಂದು ತನ್ನ ಹೆತ್ತವರು ಮತ್ತು ಹುಡುಗನಿಗೆ ಹೇಳಿದರೂ ಮುಸ್ಲಿಂ ಸಂಪ್ರದಾಯದಂತೆ ನಿಖಾ ನಡೆಸಿದ್ದು ಒಂದೇ ದಿನದಲ್ಲಿ ವಧು ಎಸ್ಕೇಪ್ ಆಗಿದ್ದು, ರಿಸೆಪ್ಷನ್‌ಗೆ ಬಂದವರು ಊಟ ಮಾಡಿ ಹೋದ ಪ್ರಕರಣ‌ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ […]