Flash News

ಬೆಳ್ತಂಗಡಿ: ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ, ಭಯಾನಕ ಹಿಂಸೆ ನಡೆಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕನ ಮೇಲೆ ಬಜರಂಗ ದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ, ಮಾರ್ಚ್ 11ರಂದು ತನ್ನ ಸ್ನೇಹಿತರೊಂದಿಗೆ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಹೋಗಿದ್ದಾನೆ. ರಾತ್ರಿ 8.30ರ ಸುಮಾರಿಗೆ […]

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ: ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಸೋಫಿಯಾ ಫಿರ್ದೌಸ್ ಪಕ್ಷದಿಂದಲೇ ಉಚ್ಛಾಟನೆ

ಭುವನೇಶ್ವರ : ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ್ದಕ್ಕೆ ಕಾಂಗ್ರೆಸ್ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿದೆ. ವಿಪ್‌ ಜಾರಿ ಮಾಡಿದ್ದರೂ ಅಡ್ಡ ಮತದಾನ ಮಾಡಿದ್ದಕ್ಕೆ ಸೋಫಿಯಾ ಫಿರ್ದೌಸ್ ಜೊತೆ ಸನಾ ಖೇಮುಂಡಿ ಶಾಸಕ ರಮೇಶ್ ಜೆನಾ, ಮೊಹನ್ನಾ ಶಾಸಕ ದಶರತ್ ಗಮಾಂಗೊ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷಕ್ಕೆ ದ್ರೋಹ ಮಾಡಿದವರು ರಾಷ್ಟ್ರಕ್ಕೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆಗೆ ಮೊದಲೇ ಸೋಫಿಯಾ ಅವರು ಕಾಂಗ್ರೆಸ್‌ ಪಕ್ಷದ ವಿರುದ್ಧವೇ […]

ಯುಎಇ; ಸಂಕಷ್ಟದ ವೇಳೆ ಪ್ರವಾಸಿಗರಿಗೆ ಆಪತ್ಬಾಂಧವನಾದ ‘ಕನ್ನಡಿಗಾಸ್ ಹೆಲ್ಪ್ ಲೈನ್’

ಹಗಲಿರುಳು ಕಾರ್ಯನಿರ್ವಹಿಸಿದ್ದಕ್ಕೆ ಅನಿವಾಸಿಗಳಿಂದ ಮೆಚ್ಚುಗೆ ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜೊತೆಗೆ ವಿಸಿಟ್ ವೀಸಾ ಮೂಲಕ ಉದ್ಯೋಗವನ್ನು ಹರಸಿಬಂದ ಜನರಿಗೆ ವಸತಿ, ಊಟದ ವ್ಯವಸ್ಥೆ ಮಾಡುವ ಮೂಲಕ ‘ಕನ್ನಡಿಗಾಸ್ ಹೆಲ್ಪ್ ಲೈನ್’ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆ. ಯುಎಇಯಲ್ಲಿ ಕೊರೋನಾ ಹಾಗು ಪ್ರವಾಹದ ವೇಳೆ ಸಂಕಷ್ಟದಕ್ಕಿದ್ದ ಕನ್ನಡಿಗರಿಗೆ ಸಹಾಯಹಸ್ತ ನೀಡುವ ಉದ್ದೇಶದಿಂದ ಹುಟ್ಟಿಕೊಂಡ ‘ಕನ್ನಡಿಗಾಸ್ ಹೆಲ್ಪ್ ಲೈನ್’, ಈ ಬಾರಿಯ ಯುದ್ಧದಿಂದ ಸಂಕಷ್ಟಕ್ಕೀಡಾದ ಕನ್ನಡಿಗರನ್ನು […]

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್: ಮಹಿಳೆಯರನ್ನ ಮಂಚಕ್ಕೆ ಕರೆಯುವ ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್!

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ (ACP) ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ […]

ಪಶ್ಚಿಮ ಬಂಗಾಳ ದೀದಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್!

ಆನೇಕಲ್ ತಾಲೂಕಿನ ಜಿಗಣಿ ಹೋಬಳಿ ಹೆಬ್ಬಗೋಡಿ ಪೊಲೀಸ್ ವ್ಯಾಪ್ತಿಯಲ್ಲಿ, ಎಲ್ಲಾರೆಡ್ಡಿ ಅನ್ನುವವರ ಜಮೀನಿನಲ್ಲಿ ಅನಧಿಕೃತ ಮನೆಗಳನ್ನು ಜೆಸಿಬಿ ಮುಖಾಂತರ ತೆರವುಗೊಳಿಸುವ ಕಾರ್ಯಾಚರಣೆ ಸಂದರ್ಭದಲ್ಲಿ ಮಹಿಳೆಯೊಬ್ಬರು “ಜೈ ಬಾಂಗ್ಲಾ” ಘೋಷಣೆ ಕೂಗುವ ಮೂಲಕ ದೇಶದ್ರೋಹ ಎಸಗಿದ್ದಾರೆಂದು ಆರೋಪಿಸಲಾಗಿತ್ತು. ಈ ಸಂಬಂಧ ಹೆಬ್ಬಗೋಡಿ ಪೊಲೀಸರು 25 ವರ್ಷದ ಮಹಿಳೆಯ ಮೇಲೆ ಜೀವಪರ್ಯಂತ ಜೈಲು ಶಿಕ್ಷೆ ವಿಧಿಸಬಹುದಾದ ರಾಷ್ಟ್ರದ್ರೋಹ, ರಾಷ್ಟ್ರದ ಅಖಂಡತೆಗೆ ಧಕ್ಕೆ ಸೇರಿದಂತೆ ಬಿ.ಎನ್.ಎಸ್ (BNS) ಸೆಕ್ಷನ್ 152, 196, 197(1) ಮತ್ತು 353(1) ಅಡಿ ಪ್ರಕರಣ ದಾಖಲಿಸಿ, ಆಕೆಯನ್ನು […]

ಇರಾನ್‌ ಪ್ರತಿಕಾರದ ದಾಳಿ ದಿಗ್ಭ್ರಮೆಗೊಳಿಸಿದೆ: ಒಪ್ಪಿಕೊಂಡ ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌: ‘ತನ್ನ ಮೇಲಿನ ದಾಳಿಗೆ ಇರಾನ್ ಈ ರೀತಿಯಾಗಿ ಪ್ರತಿಕ್ರಿಯಿಸಬಹುದು ಎಂದು ನಾವು ನಿರೀಕ್ಷಿಸಿರಲಿಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಒಪ್ಪಿಕೊಂಡಿದ್ದಾರೆ. ಸಂಘರ್ಷದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್‌, ‘ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ನಾವು ದಿಗ್ಭ್ರಮೆಗೊಂಡಿದ್ದೇವೆ. ಇರಾನ್‌ನ ಪ್ರತೀಕಾರದ ತೀವ್ರತೆಯು ನಮಗೆ ಅಚ್ಚರಿ ಮೂಡಿಸಿದೆ. ವಿಶೇಷವಾಗಿ ಕತಾರ್, ಸೌದಿ ಅರೇಬಿಯಾ, ಯುಎಇ, ಬಹ್ರೇನ್, ಕುವೈತ್ ಮೇಲೆ ಇರಾನ್‌ ದಾಳಿ ನಡೆಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ’ ಎಂದು ಹೇಳಿದ್ದಾರೆ. ‘ತನ್ನ ನೆರೆಯ ರಾಷ್ಟ್ರಗಳ ಮೇಲೆ ಇರಾನ್‌ ದಾಳಿ ಮಾಡಬಾರದಿತ್ತು. […]

RSS, ರಾ ನಿಷೇಧಿಸಿ: ಅಮೆರಿಕ ಸಂಸ್ಥೆ ಶಿಫಾರಸು

ವಾಷಿಂಗ್ಟನ್‌: ಪ್ರಪಂಚಾದ್ಯಂತ ಧಾರ್ಮಿಕ ಸ್ವಾತಂತ್ರ್ಯವನ್ನು ಮೇಲ್ವಿಚಾರಣೆ ಮಾಡುವ ಅಮೆರಿಕದ ಸಂಸ್ಥೆಯೊಂದು ಆರ್‌ಎಸ್‌ಎಸ್‌ ಮತ್ತು ಭಾರತದ ಗುಪ್ತಚರ ಸಂಸ್ಥೆ ‘ರಾ’ (ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್‌) ಅನ್ನು ನಿಷೇಧಿಸುವಂತೆ ಅಮೆರಿಕ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಅಮೆರಿಕ ಆಯೋಗ (ಯುಎಸ್‌ಸಿಐಆರ್‌ಎಫ್‌) ಸಂಸ್ಥೆಯು ತನ್ನ ವಾರ್ಷಿಕ ವರದಿಯಲ್ಲಿ ಈ ಸೂಚನೆ ನೀಡಿದ್ದು, ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯವು ಕಳವಳಕಾರಿಯಾಗಿದೆ. ಅಲ್ಲದೇ ಭಾರತವು ಧಾರ್ಮಿಕ ಸ್ವಾತಂತ್ರ್ಯದಲ್ಲಿ ನಿರ್ದಿಷ್ಟವಾದ ಕಾಳಜಿ ಮಾತ್ರ ಹೊಂದಿದೆ ಎಂದು ಹೇಳಿದೆ. ಈ ವರದಿ ಪ್ರಕಾರ, ರಾಷ್ಟ್ರೀಯ […]

ಬೆಂಗಳೂರು | ಮಕ್ಕಳ ಎದುರೇ ಮೆಕಾನಿಕ್‌ ರಷೀದ್‌ ಹತ್ಯೆ: 7 ಮಂದಿ ಸೆರೆ

ಬೆಂಗಳೂರು: ಗ್ಯಾರೆಜ್‌ ಮೇಲ್ಛಾವಣಿಗೆ ಮೋಲ್ಡಿಂಗ್‌ ಹಾಕುವ ವಿಚಾರಕ್ಕೆ ಮಕ್ಕಳ ಎದುರೇ ಗ್ಯಾರೆಜ್‌ ಮೆಕಾನಿಕ್‌ನನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳು ಸೇರಿ ಏಳು ಮಂದಿಯನ್ನು ವಿಲ್ಸನ್‌ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್‌ ಗಾರ್ಡನ್‌ನ ಬಡಾ ಮಖಾನ್‌ ನಿವಾಸಿ ಫರ್ವೀಜ್‌(36), ಸಮೀರ್‌(38) ಮತ್ತು ಅಫ್ರಿದಿ ಅಲಿಯಾಸ್‌ ಅಸ್ಗರ್‌ (39) ಹಾಗೂ ಇತರೆ ನಾಲ್ವರು ಆರೋಪಿಗಳ ಬಂಧಿಸಲಾಗಿದೆ. ಆರೋಪಿಗಳು ಮಾ.15ರಂದು ರಾತ್ರಿ 11 ಗಂಟೆ ಸುಮಾರಿಗೆ ಬಡಾ ಮಖಾನ್‌ ರಸ್ತೆಯಲ್ಲಿ ರಷೀದ್‌ ಪಾಷಾ (45) ಎಂಬಾತನ ಮೇಲೆ […]

ಇತರ ಸಮುದಾಯದಿಂದ ಅಲ್ಲ, ಮುಸ್ಲಿಮರಿಂದಲೇ ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ: ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ ವಿಧಾನಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಲಾಗಿದೆ, ಈ ಪೈಕಿ ಹೆಚ್ಚಿನವರು ಮುಸ್ಲಿಮರೇ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಅಫ್ಜಲ್‌ಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ರಾಜ್ಯಾದ್ಯಂತ ಒಟ್ಟು 1,12,860 ಎಕರೆಗಳಷ್ಟು ವಕ್ಫ್ ಆಸ್ತಿ ಇದ್ದು, ಅದರಲ್ಲಿ ಕೇವಲ 20,054 ಎಕರೆಗಳು ನಮ್ಮ ಕೈಯಲ್ಲಿವೆ. 17,969 ಎಕರೆಗಳನ್ನು ಅತಿಕ್ರಮಣ […]

ಇರಾನ್ ದಾಳಿಯಲ್ಲಿ ಇಸ್ರೇಲ್ ಪಿಎಂ ನೇತನ್ಯಾಹು ಸಾವು? 6 ಬೆರಳಿನ ವಿಡಿಯೋದಿಂದ ಅನುಮಾನ

ಟೆಲ್ ಅವೀವ್: ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧ ತೀವ್ರ ಸ್ಪರೂಪ ಪಡೆದುಕೊಂಡಿದೆ. ಇಸ್ರೇಲ್ ಜೊತೆ ಸೇರಿ ಅಮೆರಿಕ ಕೂಡ ದಾಳಿ ನಡೆಸುತ್ತಿದೆ. ಫೆಬ್ರವರಿ 28ರಂದು ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಸೇರಿದಂತೆ ಇಡೀ ಕುಟುಂಬವೇ ಹತ್ಯೆಯಾಗಿತ್ತು. ಆದರೆ ಇರಾನ್ ಯಾವುದೇ ಶರಣಾಗತಿಗೆ ಒಪ್ಪಂದೆ ಪ್ರತಿ ದಾಳಿ ನಡೆಸುತ್ತಲೇ ಇದೆ. ಖಮೇನಿ ಹತ್ಯೆ ಬಳಿಕ ಇರಾನ್ ಪ್ರತೀಕಾರವಾಗಿ ನಡೆಸಿದ ದಾಳಿಯಲ್ಲಿ ಇಸ್ರೇಲ್ ಪ್ರಧಾನಿ ಬೆಂಬಮಿನ್ ನೇತನ್ಯಾಹು ಹತ್ಯೆಯಾಗಿದ್ದಾರಾ? ಈ ಅನುಮಾನಗಳು […]