Flash News

ಮಂಗಳೂರು | ಯುವಕನಿಗೆ ಚೂರಿ ಇರಿತ ಪ್ರಕರಣ: ಓರ್ವ ವಶಕ್ಕೆ

ಬಜ್ಪೆ: ಎಡಪದವು ಎಂಬಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಅಖಿಲೇಶ್ ಎಂಬವರ‌ ಕೈಗೆ ಚೂರಿಯಿಂದ ಇರಿಯಲಾಗಿದೆ. ಪೊಲೀಸರು ಆರೋಪಿಯೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದ ಮೂವರ ಬಂಧನಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಒಂದು ಬೈಕಿನಲ್ಲಿ ನಾಲ್ವರು ಮಾರಕಾಸ್ತ್ರಗಳೊಂದಿಗೆ ತೆರಳುತ್ತಿರುವುದನ್ನು ಕಂಡು ಫಾಲೋ ಮಾಡಿದ ಅಖಿಲೇಶ್ ಮೇಲೆ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದೇ ಬೈಕ್ ನಲ್ಲಿ ನಾಲ್ವರು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತೆರಳುತ್ತಿರುವುದನ್ನು ಕಂಡು ಅದನ್ನು ವಿಡಿಯೋ ಮಾಡಲು ಬೆಂಬತ್ತಿದ ಅಖಿಲೇಶ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.ಅಷ್ಟರಲ್ಲಿ ಸ್ಥಳೀಯರು ಸೇರಿ […]

ಮಂಗಳೂರು | ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ತಲವಾರು ದಾಳಿ..!

ಬಜ್ಪೆ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ಇಲ್ಲಿನ ಎಡಪದವು ಎಂಬಲ್ಲಿ ನಡೆದಿದೆ. ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದ್ದು, ಇವರ ಬಲಕೈಗೆ ತಲವಾರು ದಾಳಿಯ ಗಂಭೀರ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಅಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು […]

ನಾಳೆ ಮೋದಿ ಅಯೋಧ್ಯೆಗೆ ಭೇಟಿ: ರಾಮಮಂದಿರದ ಮೇಲೆ ರಾರಾಜಿಸಲಿದೆ ಕೇಸರಿ ಧ್ವಜ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ನ.25) ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿದ್ದನ್ನು ಸಾಂಕೇತಿಕವಾಗಿ ಸೂಚಿಸಲು ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಲಿದ್ದಾರೆ. 10 ಅಡಿ ಎತ್ತರ ಮತ್ತು 20 ಅಡಿ ಉದ್ದದ ತ್ರಿಕೋನ ಧ್ವಜವು ಭಗವಾನ್ ರಾಮನ ತೇಜಸ್ಸು ಮತ್ತು ಶೌರ್ಯವನ್ನು ಸಂಕೇತಿಸುವ ಸೂರ್ಯನ ಚಿತ್ರವನ್ನು ಹೊಂದಿದೆ. ಅದರ ಮೇಲೆ ‘ಓಂ’ ಅನ್ನು ಕೆತ್ತಲಾಗಿದೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಪ್ರಕಟಣೆಯಲ್ಲಿ ತಿಳಿಸಿದೆ. ಪವಿತ್ರ ಕೇಸರಿ ಧ್ವಜವು ಘನತೆ, […]

ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮನವಿ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನವೆಂಬರ್ 28ರಂದು ‘ಲಕ್ಷಕಂಠ ಗೀತಾ ಪಾರಾಯಣ’ ಆಯೋಜಿಸಲಾಗಿದೆ. ಇದೇ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭಾಗವಹಿಸುತ್ತಿದ್ದಾರೆ. ಹೀಗಾಗಿ ನವೆಂಬರ್ 28 ರಂದು ಜಿಲ್ಲೆಗೆ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಪತ್ರದ ಮೂಲಕ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ಪತ್ರದಲ್ಲೇನಿದೆ?ನವೆಂಬರ್​​ 28ರ ಶುಕ್ರವಾರದಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರು ಉಡುಪಿಯ ಶ್ರೀ ಕೃಷ್ಣ ಮಠ ಮತ್ತು […]

ಬಿಜೆಪಿಯಿಂದ ಸಂಸದರಾಗಿದ್ದ ನಟ ಧರ್ಮೇಂದ್ರ; ರಾಜಕೀಯವೇ ಬೇಸರವೆಂದು ನಿರ್ಗಮನ

ಮುಂಬೈ: ಬಾಲಿವುಡ್‌ನಲ್ಲಿ ಸಾಹಸ ದೃಶ್ಯ, ಖಡಕ್ ಸಂಭಾಷಣೆ ಮೂಲಕವೇ ಹಿ–ಮ್ಯಾನ್‌ ಎಂದು ಕರೆಸಿಕೊಂಡಿದ್ದು ಮಾತ್ರವಲ್ಲ, ರಾಜಕೀಯಕ್ಕೂ ಪ್ರವೇಶಿಸಿ ಚೊಚ್ಚಲ ಚುನಾವಣೆಯಲ್ಲೇ ಸಂಸತ್ ಭವನ ಪ್ರವೇಶಿಸಿ ಅಚ್ಚರಿ ಮೂಡಿಸಿದವರು ನಟ ಧರ್ಮೇಂದ್ರ. ರಾಜಸ್ಥಾನದ ಬಿಕಾನೆರ್‌ ಕ್ಷೇತ್ರದ ಮೂಲಕ 2004ರಲ್ಲಿ ಧರ್ಮೇಂದ್ರ ಅವರು ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದರು. ಆದರೆ ಬಹುಬೇಗನೆ ಅವರು ರಾಜಕೀಯದಿಂದಲೇ ನಿರ್ಗಮಿಸಿದ್ದು ಸಾಕಷ್ಟು ಪ್ರಶ್ನೆಯನ್ನು ಹುಟ್ಟುಹಾಕಿತು. ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಹಿರಿಯ ನಾಯಕ ಎಲ್‌.ಕೆ. ಅಡ್ವಾನಿ ಅವರು ‘ಇಂಡಿಯಾ ಶೈನಿಂಗ್‌’ ಎಂಬ ಬೃಹತ್ ರಾಜಕೀಯ […]

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ

ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಟ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ‘ಹೀಮ್ಯಾನ್’ ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ ತಿಂಗಳ ಆರಂಭದಲ್ಲಿ ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಚಾರ್ಜ್ ಆಗಿ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ಹೇಳಿವೆ. ಬಾಲಿವುಡ್ ಹಿರಿಯ ನಟರಾದ ಅಮಿತಾಬ್ ಬಚ್ಚನ್, […]

Nelamangala | ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದ ಯುವಕ

ನೆಲಮಂಗಲ: ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಯುವಕ ಕೊಲೆಗೈದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ದೇವಿಶ್ರೀ (21) ಮೃತ ಯುವತಿ. ಮೂಲತಃ ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾಗಿರುವ ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ದೇವಿಶ್ರೀ ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನ ಜೊತೆ ಸ್ನೇಹಿತೆ ರೂಂಗೆ ತೆರಳಿದ್ದಳು. ಅಲ್ಲಿ ಆಕೆಯನ್ನು ಕೊಲೆ ಮಾಡಿ ಯುವಕ ಓರ್ವನೇ ವಾಪಸ್ ಆಗಿದ್ದಾನೆ. […]

ಬಿಹಾರದಲ್ಲಿ NDA ಸರ್ಕಾರಕ್ಕೆ ಅಸಾದುದ್ದೀನ್ ಒವೈಸಿ ಬೆಂಬಲ..!

ಪಾಟ್ನ: ಬಿಹಾರದಲ್ಲಿ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವುದಕ್ಕೆ ಷರತ್ತು ವಿಧಿಸಿರುವ ಒವೈಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ ಪ್ರದೇಶಕ್ಕೆ ನ್ಯಾಯ ಒದಗಿಸಿ, ಕೋಮುವಾದವನ್ನು ದೂರವಿಟ್ಟರೆ ಬಿಹಾರದ ಎನ್‌ಡಿಎ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೈದರಾಬಾದ್ ಸಂಸದರೂ ಆಗಿರುವ ಒವೈಸಿ, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂನ 5 ಅಭ್ಯರ್ಥಿಗಳು […]

ಪುತ್ತಿಲ ಪರಿವಾರ, ಬಿಜೆಪಿ ನಡುವಿನ ಸಮರ ಮತ್ತೆ ತಾರಕಕ್ಕೆ: 2028ರ ವಿಧಾನಸಭಾ ಚುನಾವಣೆಯಲ್ಲಿ ಅರುಣ್‌ ಪುತ್ತಿಲ ಪಕ್ಷೇತರ ಅಭ್ಯರ್ಥಿ..?

ಪುತ್ತೂರು: ಎರಡೂವರೆ ವರ್ಷದ ಹಿಂದೆ ಆರಂಭವಾಗಿದ್ದ ಪುತ್ತಿಲ ಪರಿವಾರ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಮತ್ತೆ ತಾರಕಕ್ಕೇರಿದೆ! 2028ರ ವಿಧಾನಸಭಾ ಚುನಾವಣೆಯಲ್ಲಿ ಅರುಣ್‌ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿ, ಅವರಿಗೆ ನಮ್ಮ ಬೆಂಬಲ ಎಂದು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನಿಸುತ್ತಿದ್ದು ಪುತ್ತಿಲ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪದ ಸಮರ ಆರಂಭವಾಗಿದೆ. 2023ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ವಂಚಿತಗೊಂಡ ಪರಿಣಾಮ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರುಣ್‌ ಪುತ್ತಿಲ 60 ಸಾವಿರಕ್ಕೂ […]

ಡಿಸೆಂಬರ್‌ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ಹೆದ್ದಾರಿ ಬಂದ್‌

ಮಂಗಳೂರು: ಕರ್ನಾಟಕದ ಭಾಗವಾಗಿರುವ ಕಾಸರಗೋಡಿನಲ್ಲಿ ಮಲಯಾಳೀಕರಣದ ವ್ಯವಸ್ಥಿತ ಕಾರ್ಯತಂತ್ರ ನಡೆಯುತ್ತಿದೆ. ಇದರ ವಿರುದ್ಧ ಡಿಸೆಂಬರ್‌ 3ನೇ ವಾರದಲ್ಲಿ ಮಂಗಳೂರು ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಡಿಸೆಂಬರ್‌ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ ನಡೆಯಲಿದೆ. ಅಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಬಳಿಕ 3ನೇ ವಾರದಲ್ಲಿ ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್‌ ನಡೆಸುವ ಮೂಲಕ ಸತ್ಯಾಗ್ರಹ ನಡೆಸಲಾಗುವುದು […]