Flash News

ಇರಾನ್ ದಾಳಿಯಲ್ಲಿ ಇಸ್ರೇಲ್ ಪಿಎಂ ನೇತನ್ಯಾಹು ಸಾವು? 6 ಬೆರಳಿನ ವಿಡಿಯೋದಿಂದ ಅನುಮಾನ

ಟೆಲ್ ಅವೀವ್: ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧ ತೀವ್ರ ಸ್ಪರೂಪ ಪಡೆದುಕೊಂಡಿದೆ. ಇಸ್ರೇಲ್ ಜೊತೆ ಸೇರಿ ಅಮೆರಿಕ ಕೂಡ ದಾಳಿ ನಡೆಸುತ್ತಿದೆ. ಫೆಬ್ರವರಿ 28ರಂದು ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಸೇರಿದಂತೆ ಇಡೀ ಕುಟುಂಬವೇ ಹತ್ಯೆಯಾಗಿತ್ತು. ಆದರೆ ಇರಾನ್ ಯಾವುದೇ ಶರಣಾಗತಿಗೆ ಒಪ್ಪಂದೆ ಪ್ರತಿ ದಾಳಿ ನಡೆಸುತ್ತಲೇ ಇದೆ. ಖಮೇನಿ ಹತ್ಯೆ ಬಳಿಕ ಇರಾನ್ ಪ್ರತೀಕಾರವಾಗಿ ನಡೆಸಿದ ದಾಳಿಯಲ್ಲಿ ಇಸ್ರೇಲ್ ಪ್ರಧಾನಿ ಬೆಂಬಮಿನ್ ನೇತನ್ಯಾಹು ಹತ್ಯೆಯಾಗಿದ್ದಾರಾ? ಈ ಅನುಮಾನಗಳು […]

ಅತ್ತಿಗೆ ಮೈದುನನ ಪ್ರೇಮದಾಟ, ಅಡ್ಡಿಯಾದ ಅಮ್ಮ ಹಮೀದಾ ಸೇರಿದಳು ಯಮನ ಪಾದ

ಎಂದಿನಂತೆ ಸ್ವಚ್ಛತಾ ಸಿಬ್ಬಂದಿ ತಮ್ಮ ಕೆಲ್ಸ ಶುರು ಮಾಡಿದ್ರು. ಒಂದು ಪ್ಲಾಸ್ಟಿಕ್ ಚೀಲದ ಗಂಟು ಅವರ ಕಣ್ಣಿಗೆ ಬಿದ್ದಿತ್ತು. ಕಸ ಇರ್ಬಹುದು ಅಂತ ಭಾವಿಸಿದ್ದವರು ಬಗ್ಗಿ ನೋಡ್ದಾಗ ಹೌಹಾರಿದ್ದರು. ಅದ್ರಲ್ಲಿದ್ದಿದ್ದು ಕಸವಲ್ಲ, ಹೆಣ. ತನಿಖೆ ವೇಳೆ ಪ್ರಕಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ಕಿದೆ. ಹಾಡಹಗಲೆ ಹೆಣ ತುಂಬಿದ್ದ ಚೀಲವನ್ನು ಹೆಗಲ ಮೇಲೆ ಹೊತ್ತು ಹೋಗ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಇನ್ನೇನು ಬೇಕು, ಹತ್ಯೆಗೈದವರು ಕಂಬಿ ಹಿಂದೆ ಸೇರಿದ್ದಾರೆ. ಘಟನೆ ನಡೆದಿರೋದು ಸೂರತ್ ನ ಅಮ್ರೋಲಿ ಪ್ರದೇಶದ […]

ದುಬೈನಲ್ಲಿ ಮತ್ತೆ ಸ್ಫೋಟದ ಸದ್ದು: ಬುರ್ಜ್ ಖಲೀಫಾ ಬಳಿ ದಟ್ಟ ಹೊಗೆ, ಆತಂಕದಲ್ಲಿ ಜನತೆ!

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) ಪ್ರಮುಖ ನಗರವಾದ ದುಬೈನಲ್ಲಿ ಶುಕ್ರವಾರ ಸ್ಫೋಟದ ಸದ್ದು ಕೇಳಿ ಬಂದಿದ್ದು, ನಗರದ ಕೇಂದ್ರ ಭಾಗದಲ್ಲಿ ದಟ್ಟ ಹೊಗೆ ಆವರಿಸಿದೆ. ವರದಿಯ ಪ್ರಕಾರ, ಪ್ರಸಿದ್ಧ ಬುರ್ಜ್ ಖಲೀಫಾ ಕಟ್ಟಡದ ಬಳಿ ಈ ಹೊಗೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಟ್ಟಡಗಳಿಗೆ ಹಾನಿ: ದುಬೈ ಇಂಟರ್ನ್ಯಾಷನಲ್ ಫೈನಾನ್ಶಿಯಲ್ ಸೆಂಟರ್ (DIFC) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಫೋಟದ ತೀವ್ರತೆಗೆ ಸಮೀಪದ ಕಟ್ಟಡಗಳು ಕಂಪಿಸಿವೆ. ಒಂದು ಕಟ್ಟಡದ ಮುಂಭಾಗದ ಭಾಗಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ. ಡ್ರೋನ್ […]

ಗ್ಯಾಸ್ ಸಿಲಿಂಡರ್ ಉಳಿಸಲು ಹಸಿ ತರಕಾರಿ, ಮೊಳಕೆ ಕಾಳು, ಹಣ್ಣುಗಳನ್ನು ತಿನ್ನಿ; ಜಗದ್ಗುರು ತೋಂಟದಾರ್ಯ ಸ್ವಾಮೀಜಿ ಸಲಹೆ !

ಗದಗ: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಯುದ್ಧದ ಭೀತಿ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ತೀವ್ರ ಕೊರತೆಯ ಹಿನ್ನೆಲೆಯಲ್ಲಿ, ಗದಗದ ಜಗದ್ಗುರು ತೋಂಟದಾರ್ಯ ಮಠದ ಶ್ರೀ ಸಿದ್ಧರಾಮ ಸ್ವಾಮೀಜಿ ಅವರು ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಅತ್ಯಂತ ವಿಶಿಷ್ಟ ಹಾಗೂ ಸಮಯೋಚಿತ ಸಲಹೆಗಳನ್ನು ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಉಳಿತಾಯಕ್ಕಾಗಿ ಜನರು ತಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು ಎಂದು ಶ್ರೀಗಳು ಮನವಿ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಉಳಿತಾಯಕ್ಕಾಗಿ ಜನರು ತಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು […]

‘ಕುಂಭ ಮೇಳದ ಹುಡುಗಿ’ ಮೊನಾಲಿಸಾಳನ್ನು ಮದುವೆಯಾದ ಹುಡುಗ ಯಾರು?

ತಿರುವನಂತಪುರ: ಮಹಾಕುಂಭಮೇಳದ ಮೂಲಕ ‘ಕುಂಭ ಮೇಳದ ಹುಡುಗಿ’ ಎಂದೇ ಖ್ಯಾತರಾಗಿದ್ದ 18 ವರ್ಷದ ಮೊನಾಲಿಸಾ ಭೋಸ್ಲೆ ಅವರು ತಮ್ಮ ಗೆಳೆಯ ಫರ್ಮಾನ್ ಖಾನ್ ಅವರೊಂದಿಗೆ ಕೇರಳದ ಪೂವಾರ್‌ನ ಅರುಮನೂರು ಶ್ರೀ ನೈನಾರ್ ದೇವ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ವರದಿಗಳ ಪ್ರಕಾರ, ಮಧ್ಯಪ್ರದೇಶದ ಇಂದೋರ್ ಮೂಲದ ಮೊನಾಲಿಸಾ ಮತ್ತು ಮಹಾರಾಷ್ಟ್ರದ ಫರ್ಮಾನ್ ಅವರು ಆರು ತಿಂಗಳ ಹಿಂದೆ ಫೇಸ್‌ಬುಕ್ ಮೂಲಕ ಪರಿಚಿತರಾಗಿದ್ದರು.ಇಬ್ಬರೂ ಭಿನ್ನ ಧರ್ಮೀಯರಾಗಿರುವುದರಿಂದ ಮೊನಾಲಿಸಾ ಅವರ ತಂದೆ ಜೈ ಸಿಂಗ್ ಭೋಸ್ಲೆ ಅವರಿಂದ ಮದುವೆಗೆ ತೀವ್ರ […]

ಫರ್ಮಾನ್ ಖಾನ್ ಜೊತೆ ಪ್ರೀತಿಗೆ ವಿರೋಧ; ಕೇರಳದಲ್ಲಿ ಆಶ್ರಯ ಪಡೆದ ಕುಂಭಮೇಳದ ಮೊನಾಲಿಸಾ!

ಕೇರಳ: ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಕಾಣಿಸಿಕೊಂಡು ಫೇಮಸ್​ ಆಗಿದ್ದ ನಿಲಗಣ್ಣಿನ ಸುಂದರಿ ಮೊನಾಲಿಸಾ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ರುದ್ರಾಕ್ಷಿ ಮಣಿಗಳನ್ನು ಮಾರಿಕೊಂಡಿದ್ದ ಹುಡುಗಿ ರಾತ್ರೋರಾತ್ರಿ ಸೋಶಿಯಲ್​ ಮೀಡಿಯಾದಲ್ಲಿ ಸಂಚಲನ ಮೂಡಿಸಿ ಫೇಮಸ್​ ಆಗಿದ್ದ ಮೊನಾಲಿಸಾ ಭೋಸ್ಲೆ, ಕೇರಳದ ತಿರುವನಂತಪುರಂನ ಥಂಪನೂರು ಪೊಲೀಸ್ ಠಾಣೆಯಲ್ಲಿ ಆಶ್ರಯ ಪಡೆದಿದ್ದಾರೆ. ಮನೆಯವರು ಗೆಳೆಯ ಫರ್ಮಾನ್​ ಖಾನ್ ಜೊತೆಗಿನ ಪ್ರೀತಿ ವಿರೋಧಕ್ಕಾಗಿ ರಕ್ಷಣೆಗಾಗಿ ಕೇರಳಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುಂಭಮೇಳದ ವೈರಲ್ ಬ್ಯೂಟಿ ಮೊನಾಲಿಸಾ ಭೋಸ್ಲೆ ತನ್ನ ಗೆಳೆಯ […]

ದೇವಾಲಯಕ್ಕೂ ತಟ್ಟಿದ ಮಧ್ಯಪ್ರಾಚ್ಯ ಸಂಘರ್ಷ: ಅನ್ನಪ್ರಸಾದ ಸೇವೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ತಾರಕಕ್ಕೇರಿರುವ ಸಂಘರ್ಷದ ಪರಿಣಾಮ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್​ಗಳ ತೀವ್ರ ಕೊರತೆ ಉಂಟಾಗಿದೆ. ಸದ್ಯ ಅದರ ಬಿಸಿ ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯಕ್ಕೂ ತಟ್ಟಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ‌ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ, ನಿತ್ಯದ ಅನ್ನಪ್ರಸಾದ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ನಿತ್ಯವೂ ದೇವಾಲಯದಲ್ಲಿ 3-4 ಸಾವಿರ ಜನರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿತ್ತು. ಬೆಳಗ್ಗೆ ಹಾಗೂ ಸಂಜೆ ಪೊಂಗಲ್, ಪುಳಿಯೊಗರೆ, ರೈಸ್ ಬಾತ್ ಹಾಗೂ ಮಧ್ಯಾಹ್ನ ಅನ್ನ ಸಾಂಬರ್ ಹಾಗೂ ಸಂಜೆ ಸಹ ಪ್ರಸಾದ ನೀಡಲಾಗುತ್ತಿತ್ತು. ಪ್ರತಿನಿತ್ಯ […]

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ; ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

ಮಂಡ್ಯ: ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ (Mandya) ಮರಳಗಾಲ ಬಳಿ ನಡೆದಿದೆ. ಮೃತ ಪತಿಯನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದ್ದು, ಅರ್ಚಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿ ಪತ್ನಿ ಶಾಲಿನಿ ಹಾಗೂ ಪ್ರಿಯಕರನನ್ನು ಹರೀಶ್ ಎನ್ನಲಾಗಿದೆ. ಸಿದ್ದಲಿಂಗಪ್ಪ ಹಾಗೂ ಶಾಲಿನಿಗೆ ಎರಡು ಮಕ್ಕಳಿದ್ದವು ಎಂದು ತಿಳಿದುಬಂದಿದೆ ಮಾ.6ರಂದು ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಲಿನಿ ಹಾಗೂ ಅದೇ ಗ್ರಾಮದ ಹರೀಶ್ ಅಕ್ರಮ […]

ನಾಚಿಕೆಯಾಗಬೇಕು…! ಟಿ20 ವಿಶ್ವಕಪ್ ಗೆಲ್ಲಿಸಿದ ಗೌತಮ್ ಗಂಭೀರ್ ಮೇಲೆ ಕಿಡಿಕಾರಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ!

ಅಹಮದಾಬಾದ್: ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ದೇವಸ್ಥಾನಕ್ಕೆ ಹೋಗಿದ್ದಕ್ಕೆ ಮಾಜಿ ಕ್ರಿಕೆಟಿಗ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಕೀರ್ತಿ ಆಜಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ವಿಶ್ವಕಪ್ ಟ್ರೋಫಿಯನ್ನು ಒಂದು ನಿರ್ದಿಷ್ಟ ಧರ್ಮದ ಗೆಲುವು ಎಂದು ಬಿಂಬಿಸಬಾರದು ಎಂದು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತ್ತು. […]

ಡಿಕೆಶಿ ಕೆಪಿಸಿಸಿ ಸಾರಥ್ಯಕ್ಕೆ 6 ವರ್ಷ: ಡಿಸಿಎಂ ಭೇಟಿಯಾಗಿ ಶುಭಕೋರಿದ ಇನಾಯತ್ ಅಲಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರು ಮಾರ್ಚ್ 10 (ಇಂದು) 6 ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆ ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಅಲಿ ಡಿಸಿಎಂ ಭೇಟಿಯಾಗಿ ಶುಭಕೋರಿದ್ದಾರೆ‌. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಇನಾಯತ್ ಅಲಿ,ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ 6 ವರ್ಷ ಪೂರೈಸಿರುವ ಮಾನ್ಯ ಉಪ ಮುಖ್ಯಮಂತ್ರಿಗಳು, ನಮ್ಮ ನಾಯಕರಾದ ಸನ್ಮಾನ್ಯ ಶ್ರೀ DK Shivakumar ಅವರನ್ನು ಇಂದು ಭೇಟಿಯಾಗಿ ಶುಭಾಶಯ ಕೋರಲಾಯಿತು. ಪಕ್ಷ ಸಂಘಟನೆ, ಸೈದ್ಧಾಂತಿಕ ಬದ್ಧತೆಯೊಂದಿಗೆ ತಮ್ಮ ದಿಟ್ಟ ನಾಯಕತ್ವದ […]