Flash News

ಖಮೇನಿ ಪುತ್ರ ಮೊಜ್ತಬಾ ಸರ್ವೋಚ್ಚ ನಾಯಕನಾಗಿ ಆಯ್ಕೆ

ಟೆಹ್ರಾನ್: ಇರಾನ್‌ನ ಧಾರ್ಮಿಕ ಪ್ರಮುಖರ ಸಭೆಯು ಅಯತೊಲ್ಲಾ ಅಲಿ ಖಮೇನಿಯ ಪುತ್ರ ಮೊಜ್ತಬಾ ಖಮೇನಿ ಅವರನ್ನು ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಇರಾನ್ ಇಂಟರ್‌ನ್ಯಾಷನಲ್ ಮೂಲಗಳು ಮಂಗಳವಾರ ವರದಿ ಮಾಡಿದೆ. ಮಾಧ್ಯಮದ ವರದಿ ಪ್ರಕಾರ, 56 ರ ಹರೆಯದ ಮೊಜ್ತಬಾ ಅವರನ್ನು ದೇಶದ ನಿಯಂತ್ರಣ ವಹಿಸಿಕೊಳ್ಳಲು ಆಯ್ಕೆ ಮಾಡಲಾಗಿದ್ದು, ಅವರು ಅಲಿ ಖಮೇನಿಯವರ ಎರಡನೇ ಪುತ್ರ ಮತ್ತು ವೀಕ್ಷಕರು ಅವರನ್ನು ಸಂಭಾವ್ಯ ಉತ್ತರಾಧಿಕಾರಿಯಾಗಿ ದೀರ್ಘಕಾಲದಿಂದ ಪರಿಗಣಿಸುತ್ತಿದ್ದರು. ತಂದೆ ಅಮೆರಿಕ-ಇಸ್ರೇಲಿ ಜಂಟಿ ದಾಳಿಯ ಅಲೆಯಲ್ಲಿ ಹತ್ಯೆಗೀಡಾದ ಕೆಲವೇ […]

ರಹಸ್ಯವಾಗಿ ಆಟವಾಡಿದ ಚೀನಾ: ಇರಾನ್‌ ಕೈ ಸೇರಿದೆ 5 ದೊಡ್ಡ ಶಸ್ತ್ರಾಸ್ತ್ರ: ಇಸ್ರೇಲ್-ಅಮೆರಿಕಾ ಖೇಲ್ ಖತಮ್!

ಟೆಹ್ರಾನ್: ಇರಾನ್ ಜೊತೆಗಿನ ಯಾವುದೇ ನೇರ ಶಸ್ತ್ರಾಸ್ತ್ರ ಒಪ್ಪಂದಗಳನ್ನು ಚೀನಾ ಅಧಿಕೃತವಾಗಿ ನಿರಾಕರಿಸಿದ್ದರೂ, ಅಮೆರಿಕ ಮತ್ತು ಇಸ್ರೇಲ್ ಜೊತೆ ಇರಾನ್ ನಡೆಯುತ್ತಿರುವ ಸಂಘರ್ಷದ ಮಧ್ಯೆ ಟೆಹ್ರಾನ್‌ನ ವಾಯು ಮತ್ತು ಕ್ಷಿಪಣಿ ರಕ್ಷಣೆಯನ್ನು ಬಲಪಡಿಸುವಲ್ಲಿ ಬೀಜಿಂಗ್ ಪಾತ್ರವನ್ನು ತಜ್ಞರು ಪ್ರಶ್ನಿಸುತ್ತಿದ್ದಾರೆ. ಪ್ರಸ್ತುತ, ಇರಾನ್‌ನ ಮಿಲಿಟರಿ ಸಾಮರ್ಥ್ಯಗಳು ತನ್ನದೇ ಆದ ದೇಶೀಯ ತಂತ್ರಜ್ಞಾನ ಮತ್ತು ರಷ್ಯಾದಂತಹ ಇತರ ಪಾಲುದಾರರ ಮೇಲೆ ಹೆಚ್ಚು ಅವಲಂಬಿತವಾಗಿವೆ. ವರದಿಯ ಪ್ರಕಾರ, ಅಂತಾರಾಷ್ಟ್ರೀಯ ನಿರ್ಬಂಧಗಳು ಮತ್ತು ಭೌಗೋಳಿಕ ರಾಜಕೀಯ ಅಪಾಯಗಳಿಂದಾಗಿ ಚೀನಾ ಮತ್ತು ಇರಾನ್ ನಡುವಿನ […]

ದುಬೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಬಳಿ ಡ್ರೋನ್ ದಾಳಿ; ಅಧಿಕಾರಿಗಳು ಹೇಳಿದ್ದೇನು?

ದುಬೈ: ದುಬೈನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ದಾಳಿಯಿಂದಾಗಿ ರಾಯಭಾರ ಕಚೇರಿಯ ಸಮೀಪ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ಧಾವಿಸಿದ ದುಬೈ ಸಿವಿಲ್ ಡಿಫೆನ್ಸ್ ತಂಡ ಬೆಂಕಿಯನ್ನು ನಂದಿಸಿದೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ದುಬೈ ಸರ್ಕಾರಿ ಮಾಧ್ಯಮ ಕಚೇರಿ ಸ್ಪಷ್ಟಪಡಿಸಿದೆ. ದಾಳಿಯ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ದುಬೈನ ತುರ್ತು ಸ್ಪಂದನಾ ತಂಡಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ಹತೋಟಿಗೆ […]

ಇರಾನ್ ಸೇಡಿನ ದಾಳಿ: ಕೇವಲ ಎರಡು ದಿನದಲ್ಲಿ 650 ಅಮೇರಿಕಾ ಸೈನಿಕರು ಸಾವು

ಪಶ್ಚಿಮ ಏಷ್ಯಾದಾದ್ಯಂತ ಅಮೆರಿಕದ ಮಿಲಿಟರಿ ಸ್ಥಾಪನೆಗಳು ಮತ್ತು ಯುದ್ಧನೌಕೆಗಳ ವಿರುದ್ಧ ಇರಾನ್ ಸಶಸ್ತ್ರ ಪಡೆಗಳು ನಡೆಸಿದ ಪ್ರತೀಕಾರದ ಆಪರೇಷನ್ ಟ್ರೂ ಪ್ರಾಮಿಸ್ 4 ರ ಮೊದಲ ಎರಡು ದಿನಗಳಲ್ಲಿ 650 ಕ್ಕೂ ಹೆಚ್ಚು ಅಮೆರಿಕದ ಮಿಲಿಟರಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನ್ ಗಾರ್ಡ್ ಕಾರ್ಪ್ಸ್ (IRGC) ವಕ್ತಾರರು ತಿಳಿಸಿದ್ದಾರೆ. “ಯುದ್ಧದ ಮೊದಲ ಎರಡು ದಿನಗಳಲ್ಲಿ, 650 ಅಮೇರಿಕನ್ ಸೈನಿಕರು ಕೊಲ್ಲಲ್ಪಟ್ಟರು ಮತ್ತು ಗಾಯಗೊಂಡರು” ಎಂದು ಬ್ರಿಗೇಡಿಯರ್ ಜನರಲ್ ಅಲಿ ಮೊಹಮ್ಮದ್ ನೈನಿ ಮಂಗಳವಾರ […]

ಉಳ್ಳಾಲ ಮಸೀದಿ ಸ್ಫೋಟಿಸುತ್ತೇನೆಂದು ಎಂದು ಕಮೆಂಟ್: ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಮಂಗಳೂರು: ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಾಕಾರಿ ಕಾಮೆಂಟ್ ಮಾಡಿದ್ದ ಭಟ್ಕಳ ಮೂಲದ ವ್ಯಕ್ತಿಯನ್ನು ಮಂಗಳೂರು ನಗರದ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಜಾಲಿ ನಿವಾಸಿ ಶಂಕರ್ ಮಸ್ತಪ್ಪ ಮೊಗೇರ್ (35) ಎಂದು ಗುರುತಿಸಲಾಗಿದೆ. ಮಾರ್ಚ್ 2ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದಕ್ಕೆ ಕಾಮೆಂಟ್ ಮಾಡಿದ್ದ ಆರೋಪಿಯು, “Support madi bro ullal masjid hatra bomb blast madtini” (ಬೆಂಬಲ ನೀಡಿ ಬ್ರೋ, […]

ಯುದ್ಧದ ನಡುವೆಯೇ ಇರಾನ್‌ನಲ್ಲಿ ರಣಭೀಕರ ಭೂಕಂಪ

ಟೆಹರಾನ್: ಇಸ್ರೇಲ್ ಮತ್ತು ಅಮೆರಿಕ ದಾಳಿ ತೀವ್ರಗೊಂಡಿರುವ ಹೊತ್ತಿನಲ್ಲೇ ದಕ್ಷಿಣ ಇರಾನ್ ನ ಗೆರಾಶ್ ಪ್ರಾಂತ್ಯದಲ್ಲಿ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ. ಆದರೆ, ಈ ಭೂಕಂಪನದಲ್ಲಿ ಯಾವುದೇ ಗಮನಾರ್ಹ ಹಾನಿ ಅಥವಾ ಸಾವು ನೋವು ಆದ ಬಗ್ಗೆ ತಕ್ಷಣದಲ್ಲಿ ಯಾವುದೇ ವರದಿಯಾಗಿಲ್ಲ. ಇರಾನಿನ ಸೇನಾ ನೆಲೆಗಳ ಮೇಲೆ ವಾಯು ದಾಳಿಗಳು ತೀವ್ರಗೊಂಡಿರುವ ವೇಳೆಯೇ ಈ ಭೂಕಂಪನ ಸಂಭವಿಸಿದೆ. ಈಗಾಗಲೇ ಉದ್ವಿಗ್ನಗೊಂಡಿರುವ ಪ್ರಾದೇಶಿಕ ಯುದ್ಧಗಳಿಗೆ ಈ ಕಂಪನವು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಭೂಕಂಪದಿಂದ ಉಂಟಾದ ನಷ್ಟ, ಸಾವು-ನೋವುಗಳ ಬಗ್ಗೆ […]

ಖಮೇನಿ ಇದ್ದ ನಿಖರವಾದ ಸ್ಥಳ, ಅಮೆರಿಕ ಹಾಗೂ ಇಸ್ರೇಲ್​ಗೆ ತಿಳಿಸಿದ್ದು ಯಾರು?

ಟೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಸಮರ ಸಾರುತ್ತಿವೆ. ಕಳೆದ ಮೂರು ದಿನಗಳಿಂದ ದಾಳಿ, ಪ್ರತಿದಾಳಿಗಳು ನಡೆಯುತ್ತಿವೆ. ಅಮೆರಿಕ ಹಾಗೂ ಇಸ್ರೇಲ್ ಸೇನೆಯು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲ ಅಲಿ ಖಮೇನಿಯನ್ನು ಹತ್ಯೆ ಮಾಡಿದೆ. ಹಾಗಾದರೆ ಖಮೇನಿ ಇದ್ದ ಜಾಗ ಅಮೆರಿಕ ಹಾಗೂ ಇಸ್ರೇಲ್ ಪಡೆಗಳಿಗೆ ಅಷ್ಟು ನಿಖರವಾಗಿ ಹೇಗೆ ತಿಳಿಯಿತು ಎನ್ನುವುದಕ್ಕೆ ಉತ್ತರ ಇಲ್ಲಿದೆ. ಇಸ್ರೇಲ್ ಸುಪ್ರೀಂ ನಾಯಕ ಅಲಿ ಖಮೇನಿ ಮತ್ತು ಅವರ ಭದ್ರತಾ ಸಿಬ್ಬಂದಿಯ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಇರಾನ್‌ನ […]

ಜೀವ ಉಳಿಸಿಕೊಳ್ಳಬೇಕಾದರೆ ನಿಮ್ಮ ದೇಶಕ್ಕೆ ಹಿಂತಿರುಗಿ: ರಿಯಾದ್ ಮೇಲೆ ಇರಾನ್ ಭೀಕರ ದಾಳಿ, ಬೆಚ್ಚಿಬಿದ್ದ ಅಮೆರಿಕಾ

ಇಸ್ರೇಲ್ ಮತ್ತು ಅಮೆರಿಕ ದಾಳಿಗಳನ್ನು ನಡೆಸುತ್ತಿದ್ದರೆ, ಅದರ ಬೆನ್ನಲ್ಲೇ ಇರಾನ್ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಅಟ್ಯಾಕ್ ಮಾಡುತ್ತಿದೆ. ಈಗ, ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ಇರಾನ್ ಕೋಲಾಹಲ ಸೃಷ್ಟಿಸಿದೆ. ಅಮೆರಿಕವನ್ನು ಬೆಚ್ಚಿಬೀಳಿಸುತ್ತಾ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಇರಾನ್ ದಾಳಿ ನಡೆಸಿದೆ. ತನ್ನ ನಾಗರಿಕರು ಅಮೆರಿಕಕ್ಕೆ ಹಿಂತಿರುಗುವಂತೆ ಅದು ತಕ್ಷಣವೇ ಸಲಹೆ ನೀಡಿದೆ. ಏತನ್ಮಧ್ಯೆ, ಇರಾನ್ ಯುದ್ಧದಲ್ಲಿ ಕೊಲ್ಲಲ್ಪಟ್ಟ ಅಮೆರಿಕ ಸೈನಿಕರ ಸಂಖ್ಯೆಯೂ ಹೆಚ್ಚಾಗಿದೆ. ತನ್ನ ಆರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕವೇ ಒಪ್ಪಿಕೊಂಡಿದೆ. […]

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

ಭಾರತದ ಮುಸ್ಲಿಮರ ಪರ ಧ್ವನಿ ಎತ್ತಿದ್ದ ಖಮೇನಿ, ಇರಾನ್‌‌ಗೆ ಮುಳುವಾಯಿತಾ? ನವದೆಹಲಿ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ ಮಾಡಿದ್ದಕ್ಕೆ ಇಸ್ರೇಲ್‌, ಅಮೆರಿಕವನ್ನು ಭಾರತ ಯಾಕೆ ಇನ್ನೂ ಖಂಡಿಸಿಲ್ಲ ಎಂಬ ಪ್ರಶ್ನೆ ಈಗ ದೊಡ್ಡ ಚರ್ಚೆಯ ವಿಚಾರ. ಹಾಗೆ ನೋಡಿದರೆ ಭಾರತ ಮತ್ತು ಇರಾನ್‌ ಸಂಬಂಧ ಚೆನ್ನಾಗಿಯೇ ಇದೆ. ಈ ಹಿಂದೆ ಅಮೆರಿಕ ಇರಾನ್‌ ಮೇಲೆ ಹಲವು ಆರ್ಥಿಕ ನಿರ್ಬಂಧ ಹೇರಿದ್ದರೂ ಭಾರತ ಇರಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸುತ್ತಿತ್ತು. ಇರಾನಿನ ಚಾಬಹಾರ್‌ ಬಂದರನ್ನು 10 ವರ್ಷ […]

ನೆತನ್ಯಾಹು ಹತ್ಯೆ? ಶಕ್ತಿಶಾಲಿ ಖೈಬರ್ ಕ್ಷಿಪಣಿ ಮೂಲಕ ಇಸ್ರೇಲ್ ಪ್ರಧಾನಿ ಕಚೇರಿ ಸರ್ವನಾಶ: ಇರಾನ್ ಹೇಳಿಕೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿರುವುದಕ್ಕೆ ಇರಾನ್ ಆಕ್ರೋಶಗೊಂಡಿದೆ. ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇರಾನ್ ಇಸ್ರೇಲ್ ಪ್ರಧಾನಿ ಕಚೇರಿಯನ್ನೇ ಗುರಿಯಾಗಿಸಿಕೊಂಡಿದೆ. ಇರಾನ್ ತನ್ನ ಬತ್ತಳಿಕೆಯ ಶಕ್ತಿಶಾಲಿ ಖೈಬರ್ ಬ್ಯಾಲಿಸ್ಟಿಕ್ ಕ್ಷಿಪಣಿ ಮೂಲಕ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯನ್ನೇ ಹೊಡೆದುರುಳಿಸಿದೆ. ಇದೇ ವೇಳೆ ವಾಯುಪಡೆಯ ಕಮಾಂಡರ್ ಅನ್ನು ಗುರಿಯಾಗಿಸಿಕೊಂಡಿದೆ. ಕ್ರಿಮಿನಲ್ ಪ್ರಧಾನಿಯನ್ನು ಗುರಿಯಾಗಿಸಿಕೊಂಡಿರುವುದಾಗಿ ಇರಾನಿನ ಸೇನೆ ಹೇಳಿಕೆ ನೀಡಿದೆ. ಯಶಸ್ಸಿನ ಸುದ್ದಿಯನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಏತನ್ಮಧ್ಯೆ, ಖೈಬರ್ ಕ್ಷಿಪಣಿ ದಾಳಿಯು […]